Home / ಕವನ / ಕವಿತೆ / ಸೂರ್‍ಯ

ಸೂರ್‍ಯ

ಈ ಸಂಜೆ ಕಂತುವ ಸೂರ್‍ಯ
ಯಾಕೋ ಮಂಕಾಗಿ
ಅವನ ಬಣ್ಣವೆ ಜಿಗುಟಾಗಿ…
ಎಲ್ಲವೂ ಸ್ತಬ್ಧವಾಗಿತ್ತು; ಗಾಳಿ
ಚಲಿಸುತ್ತಿರಲಿಲ್ಲ; ಹಕ್ಕಿಗಳು ಮಾತ್ರ
ಗೂಡಿಗೆ ಮರಳುತ್ತಿದ್ದವು.

ಎಲ್ಲ ಧ್ವನಿಗಳು ಪ್ರತಿಧ್ವನಿಗಳಾಗಿ
ಒರಲಿ ಉರುಳಾಡಿ ಶಬ್ಧಗಳೇ
ಸರಿದು ಹೋಗಿ ಎಲ್ಲೆಲ್ಲೂ ಮೌನ
ಓಣಿ ಎರೆದು ಮಲಗಿಸಿ ಕಂದನಂತೆ
ತೆಪ್ಪಗೆ ಮಲಗಿತ್ತು ಮಂಕಾದ ಸೂರ್ಯ
ಬೇರೆ ನಾಡಿಗೆ ಬೆಳಕು ಮಾರಾಟ ಮಾಡಲು.
ಹೋದ.

ಮರದಲ್ಲಿ ಅರಳದ ಹೂವಿನ
ಮೊಗ್ಗುಗಳಿಗೆ ಮೌನದ ಕತ್ತಲು
ಕಚುಗುಳಿ ಇಟ್ಟು ಅನುರಣಿಸಿದಾಗ
ಕೈ ಕಾಲು ಮಡಚಿ ಮಲಗಿದ ಕತ್ತಲೆ
ಕೋಣೆ ತುಂಬಾ ಕಂತಿದ ಸೂರ್ಯ
ಹಳದಿ ಬಣ್ಣ, ಕಣ್ಣು ಮುಚ್ಚಾಲೆಯಾಟದಲಿ
ಗೆದ್ದವರು ಯಾರೋ ಸೋತವರ ಯಾರೋ
ಸಣ್ಣ ಬೀಜಗಳ ಮರ ಮಾಡುವ ಸೂರ್ಯ
ಮತ್ತೆ ರಾಜಾರೋಷವಾಗಿ ಉದಯಿಸಿದ.

ಹೊಸ ಪಲ್ಲಕ್ಕಿ ಸಾಗಿದ ಮಾರ್ಗ ಗುಂಟ
ಮತ್ತೆ ಗೌಜುಗದ್ದಲ, ಒಬ್ಬರ ಮೇಲೊಂದು
ಮಗದೊಂದು ಪಾದದ ಗುರುತುಗಳು
ಸಾಗಿ ತೇಲಿ ಹೋದ. ಇರುವೆಗಳ ಸಾಲು.
ದಾರಿ ಬದಿಯ ಗಿಡ ಟೊಂಗೆಗಳಿಂದ ಇಣುಕಿದ
ಸೂರ್ಯ ಸೂಸಿ ರಾಗ ಧ್ವನಿಗಳು ಚೈತನ್ಯಗಳು

ಕಂತುವ ಸೂರ್ಯ ಹುಟ್ಟುವ ಸೂರ್ಯ
ನಮ್ಮ ನಿಮ್ಮಲ್ಲಿ ಏನು ಮಜಾ ಹುಟ್ಟಿಸಿದ್ದಾನೆ.
ವಿಸ್ಮಯ ರಂಗುಗಳಿಗೆ ಬೆಪ್ಪಾದ ಜನಪದ
ಬದುಕು ಕವಿತೆಗಳಲ್ಲಿ ಅವನನ್ನು ಹಣಿದಿದ್ದೇ
ಹಣೆದಿದ್ದು ಮತ್ತೆ ಎಲ್ಲಾ ಜೀವದ
ಉಸಿರಾದುದಕ್ಕೆ ಚಿಗುರಿ ಚಿಮ್ಮಿದಕ್ಕೆ
ಪೂರ್ಣ ಅರಳಿದ ಹೂ, ಕಳಿತ ಹಣ್ಣು
ಮಾಗಿದ ಎಲೆ ಸೋಗೆಯ ಮನೆ, ಆಳದ
ಬೇರು ಎಲ್ಲವೂ ಅವನಾಗಿದ್ದು ವಿಸ್ಮಯ ತಾಯ್ಗಂಡ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...