Home / ಕವನ / ಕವಿತೆ / ನೆನಪು

ನೆನಪು

ಹೊಳೆದಂಡೆಯ ಮುಟ್ಟಲು ಮರುಕಿ
ಮೆಲ್ಲಗೆ ಸ್ಪರ್ಶಿಸಿದಾಗ ಮುಳ್ಳು ಚುಚ್ಚಿ
ರಕ್ತ ಬಂತು ನಿನ್ನ ನೆನಪಾಗಿ
ಹಿತ್ತಲದ ನಂದಿ ಬಟ್ಟಲು ಹೂಗಳು
ಗಂಧ ಯಾಕೋ ಪರಿಮಳ ಸೂಸಲು
ಕಣ್ಣುಗಳು ಬಾಡಿದವು ನಿನ್ನ ನೋಟಗಳ ಮರೆತು.

ಯಾರು ಎಲ್ಲಿ ಯಾವ ಭಾವಕೆ
ಬಸಿರಾದರೂ, ನದಿ ಸುಮ್ಮನೆ
ಹರಿಯುತ್ತದೆ ಸಾಗರದ ಸೆಳುವಿಗೆ
ಮುಂಜಾನೆ ಅರಳಿದ ಹೂ ಸಂಜೆ ಬಾಡಿ
ಮಬ್ಬು ಕತ್ತಲೆ ಕೋಣೆಯಲ್ಲಿ ನಿನ್ನ ಕರಿ
ನೆರಳು ದಾಟಿ ಬರುವುದಿಲ್ಲ ಅಂಗಳದಿಂದ
ಕೋಣೆಯವರೆಗೆ ಹೊರಗೆ ಸ್ವಲ್ಪ
ತಿಳಿ ಬೆಳದಿಂಗಳು ಮಾತ್ರ ಹರಡಿದೆ ಮುಸುಕಾಗಿ.

ಎಲ್ಲೆಲ್ಲೋ ಹಾರಾಡಿದ ಚಿಟ್ಟೆ ಹೀರಿದ
ಮಕರಂದ ಜೇನು ಗೂಡಾಗಿ ನನ್ನೆದೆ
ಸಿಹಿ ಹನಿಯ ತುಂಬಿದೆ ಬರೀ ಬೆವರ
ಹನಿಗಳು ಸಾರುತ್ತಿವೆ; ತಂಗಾಳಿ ಬೀಸದ
ಉರಿ ಹಗಲಿನಲಿ ಎಲ್ಲೆಲ್ಲೋ ಆಸ್ಪತ್ರೆಯ
ವಾಸನೆ ನೀನು ಮುಖ ತೋರಿಸದೆ
ಜಡಿ ಹೋದ ಸೂರ್ಯ ತಾಪದಿಂದ
ಕುದಿದ ಹಗಲು ಹೈರಾಣವಾಗಿದೆ ನಿನ್ನಿಂದ.

ಎಲ್ಲ ಕಾಲಕ್ಕೂ, ಎಲ್ಲರಂತೆ ಇಲ್ಲದ ಸಂಬಂಧ
ನೆನಪಿನಕೊಂಡಿ ಅಲ್ಲ ನಿನ್ನ ಇಲ್ಲಿ ನನ್ನ
ಅಬ್ಬೆ ಪಾರಿಯಂತೆ ನಿಲ್ಲಿಸಿ ಬಿಟ್ಟಿವೆ ಬಯಲಿನಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...