ಸಂತ

ಈ ಸಂಜೆ ಗುಡಿಯ ಕಟ್ಟೆಯ
ತುದಿಯಲ್ಲಿ ಕಾಲು ಮಡಚಿ ಕುಳಿತ
ಮುದುಕನ ಕಣ್ಣ ತುಂಬ ನೀರಿನ ಪಸೆ
ಎಲುಬುಗಳು ಹಾಯ್ದ ಮುಖದ
ಆಕಾರದಲ್ಲಿ ಮುಕ್ಕಾದ ಮೂರ್‍ತಿಯ ಸ್ವರೂಪದವನು

ಅವನ ದೃಷ್ಠಿ ಹರಿವ ಉದ್ದಗಲಕೂ
ಮಾವಿನ ತೋಪಿನ ನೆರಳು ಉರಿವ
ಸೂರ್ಯ ನಾಚಿಕೆಯಿಂದ ಮರೆಯಾಗಿದ್ದಾನೆ
ನಕ್ಷತ್ರಗಳು ಅವನ ದಾರಿಗುಂಟ ಮೆರವಣಿಗೆ
ಹೊರಟಿದೆ ಸಂತೆಯಲಿ ಒಬ್ಬನೇ ನಿಂತ ಸಂತನವನು.

ಹಾಸಿ ಬೀಸಿದ ಹಕ್ಕಿಗೂಡಿನ ತುಂಬ ಧ್ವನಿ
ಚಿಲಿಪಿಲಿ ಕವಣಿ ಹೊಡೆದು ಅರಳಿದ ಬೀಜಗಳು
ಮತ್ತೆಲ್ಲಾ ಹಸಿರಾಚೆಯ ಹಳದಿ ಒಣ ಹುಲ್ಲು
ಬಂಕದ ಕಂದೀಲಿನ ತುಂಬ ಕಪ್ಪು ಕಾಡಿಗೆ
ಬರದ ಕತ್ತಲಲ್ಲಿ ಮಂಕಾಗಿ ತೂಕಡಿಸುವ ರೈತನವನು

ಇದ್ದ ಬದ್ಧ ನೆಲವೆಲ್ಲ ಒಕ್ಕಲೆಬ್ಬಿಸಿ
ಹಸಿರು ನೆಲ ಕಪ್ಪಾಗಿ ಬಿತ್ತಲಾಗದ
ಬೀಜಗಳು ಕಣ್ಣ ಪಾಸೆ ತುಂಬ ಬಿಳಿ ಹತ್ತಿ
ಕರಿಚಹಾದ ಕಪ್ಪಿನಲಿ ಗುಟುಕರಿಸಿ ಉಳಿದ ಬಿಕ್ಕು
ನೆರೆ ಸಂತ್ರಸ್ತದ ಶಿಬಿರದಲ್ಲಿ ಮೌನವಾಗಿ ಕುಳಿತ ಶಿಬಿ ಚಕ್ರವರ್ತಿ.
ಊಟ ಮಾಡುವ ನಾವು ನೀವು
ಎಲ್ಲ ಬಲ್ಲವರಂತೆ ಮಾತನಾಡುವುದು ಕಂಡ
ಕರಿಹೊಲ, ಹಸಿರು ಮೈದಾನ, ಬೀಜ ಪಿಸುಗುಡುವ
ಮೌನದಾಟಿ ಬಳಲಿದ ಕೈಗಳ ಸ್ಪರ್ಶ ಬಳಲಿ
ಒರಟಾದ ಲೆಕ್ಕವೇ ಇಲ್ಲದ ಖಾಲಿ ಕೈಯಲ್ಲಿ ಕುಳಿತ ಸಂತ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...