Home / ಕವನ / ಕವಿತೆ / ಬುದ್ಧ ಮತ್ತು ನನ್ನ ಮಾತುಗಳು

ಬುದ್ಧ ಮತ್ತು ನನ್ನ ಮಾತುಗಳು

ಬುದ್ಧ ಹೇಳಿದ ಮುಳ್ಳಿನ ಕಿರೀಟ
ಧರಿಸಿದರೆ ನೋವುಗಳು ಎದೆಗಿಳಿದು
ಅಲ್ಲಿ ಮರಗಳು ಹೂಗಳು ಹುಲ್ಲು ಹಸಿರು
ಎಲ್ಲವೂ ಮೌನವಾಗುತ್ತವೆ.
ಅವನಿಗೆ ಗೊತ್ತಿಲ್ಲ ಮುಳ್ಳಿನ ಹಾಸಿಗೆಯ
ಕಡಿತದಲಿ ನಕ್ಷತ್ರಗಳ ತಿಳಿ ಬೆಳದಿಂಗಳು
ಎಲ್ಲವೂ ಉಕ್ಕಿಯ ಉರಿಯಂತೆ ಸುಡುತ್ತವೆ
ಎಂದೂ ಮತ್ತೆ ಮಾತಿನ ಶಸ್ತ್ರ ಪ್ರಹಾರ
ಮೌನದ ಆಳವನ್ನು ಕಲುಕಿ ರಾಡಿ ಮಾಡುತ್ತದೆಂದು.

ಬುದ್ಧ ಹೇಳಿದ ಅವಮಾನ ಹಿಯ್ಯಾಳಿಸಿದರೆ
ಈ ದೇಹ ಬಂಧನದಿಂದ ಬಿಡುಗಡೆ
ಸಿಗುತ್ತದೆ. ಎಂದೂ ಅಲ್ಲ ಕ್ರೂರ ಮನಸ್ಸಿರುವುದಿಲ್ಲ,
ಎಲ್ಲವೂ ಮಾತಿನಾಚೆಯ ಮೌನವಾಗುತ್ತದೆ.
ಅವನಿಗೆ ಗೊತ್ತಿಲ್ಲ ಉಳಿಯಿಂದ
ಹೊಡೆದು ಶಿಲ್ಪಿ ಮಾಡಿದ ಮಾಟ
ಮೂರ್ತಿ ತಾಳ್ಮೆಯಿಂದ ಎಲ್ಲ ದಾಟಿ ಮೀರಿ
ಪೂಜೆಗೊಳ್ಳುತ್ತದೆ ಕತ್ತಲೆಯಿಂದ ಬೆಳಕಿನ ಅರಮನೆಯಲಿ.

ಬುದ್ಧ ಹೇಳಿದ ಎಲ್ಲ ಬಿಟ್ಟು ಊರಿಗೆ ಬೆನ್ನು ಹಾಕಿ
ನಿರ್ಮೋಹಿಯಾಗಿ ನಡೆದರೆ ದಾರಿಯಲಿ ಏಕಾಂಗಿಯಾಗಿ
ನಿರ್ಲಕ್ಷಿಸಿದ ಸತ್ಯಗಳು ಕಣ್ಣಮುಂದೆ ಕಂಗೊಳಿಸುತ್ತದೆ
ಮತ್ತೆ ಭವ ಬದುಕು ಒಂದಾಗುತ್ತದೆ.
ಅವನಿಗೆ ಗೊತ್ತಿಲ್ಲ ಸಂತೆಯೊಳಗೆ ನಿಂತು
ಸತ್ಯವನ್ನ ಸುಳ್ಳಿನೊಡನೆ ಹೊಡೆದಾಡಿ ನಮ್ಮಿಂದಲೇ
ಕಳಚಿ ಕೊಂಡು ಹೊಸ ನಮೂನೆಯ ಮನಸ್ಸು.
ಬದುಕು ಮತ್ತೆ ನಮ್ಮಲ್ಲೇ ಹುಟ್ಟಿಕೊಳ್ಳುತ್ತದೆ ಎಂದು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...