Home / ಕವನ / ಕವಿತೆ / ವಸುಂಧರೆ

ವಸುಂಧರೆ

ನೀಲಿ ಅಂಬರದ ತಿಳಿಬೆಳದಿಂಗಳು
ಸಾವಿರಾರು ಚುಕ್ಕಿ ಮಿನುಗು ತೇಲಿ
ಹಾರಿದ ಬೆಳ್ಳಕ್ಕಿ ಸಾಲಿನಲ್ಲಿ ಮೋಡಗಳು
ಎಚ್ಚರಗೊಂಡು ದಾವಾ ಹರಡಿ ಹರಡಿ
ಪೃಥ್ವಿ ಪುಲಕಗೊಂಡಳು ಬಯಲ ತುಂಬೆಲ್ಲಾ ಹಸಿರು.

ಚಿಗುರು ಸ್ಪರ್ಶಕ್ಕೆ ಮುದಗೊಂಡ ಬೀಜ
ಶಕ್ತಿ ವಿಜೃಂಭಿಸಲು ಒಡಲ ತುಂಬಿಕೊಂಡಿತು
ಹುಣ್ಣಿಮೆ ಎಲ್ಲೆಲ್ಲೂ ರಸಪಾಕ ಕುದಿಯ
ಪರಿಮಳದ ಹಾದಿ ಹರವಿಕೊಂಡಿತು
ಇಹದ ಕೊಳದ ತುಂಬ ಕೆಂದಾವರೆ
ಅರಳಿತು ಮಣ್ಣ ತುಂಬೆಲ್ಲಾ ಹೊನ್ನು ಹಳದಿ.

ಸಮುದ್ರದ ನೀರೆಲ್ಲಾ ತಾಯಿಯ ಎದೆ
ಹಾಲಾಗಿ ತುಂಬಿದ ಬೆಳಸಿಕಾಳು ಚಿಲ್ಲನೆ
ಚಿಮ್ಮಿಹಾಸಿ ಎಲ್ಲೆಲ್ಲೂ ಆರ್‍ದ್ರತೆಯ ಬೆಳಕು
ಆದಿಯಿಂದ ಅಂತ್ಯದವರೆಗೆ ಅವಳ
ಮಡಿಲು ಸುರಿದ ಭಾವ ತರಂಗದ
ಮಮತೆಯ ರೂಹುಗೊಂಡ ಹಕ್ಕಿ ಹಾಡು ಕವಿತೆ.

ಎಲ್ಲೆ ಮೀರಿದ ಭಾವ ಅರ್ಥ ಐಶ್ವರ್ಯ
ಒಡಲ ಸಿರಿ ಹರಡಿ ಗರಿಗಳ ಗುಂಟ ಹರಿದಗಾಳಿ
ಅದರ ರೊಟ್ಟಿಗೆ ಹರಡಿದ ಹನಿ ಸಿಂಚನ ಇಬ್ಬನಿ
ಬೆಳದಿಂಗಳು ಚಕ್ಕಿ ಮೋಡಗಳು ಇಳಿದು
ಬಂದ ಗರ್ಭ ಸೂಸಿದಳು ತಿಳಿಬೆಳಕು.
ವಸುಂಧರಾ ಈಗ ಭೂಮಿ ತಾಯಿಯಾದಳು
ಎಲ್ಲೆಲ್ಲೂ ಚಿಲಿಪಿಲಿ ಕಂಪನಗಳು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...