ಅಭಿಮಾನವಿಡು

ಅಭಿಮಾನವಿರಲೀ,
ದೇಶ, ಭಾಷೆಯ ರೀತಿ, ನೀತಿಯ ಸಿರಿಯುಸಿರಲಿ,
ವಿಶ್ವಕೋಶದ,
ಧಮನಿ ದಮನಿಯ, ಬಿತ್ತಿ ಬೆಳೆಸಿದ ತೋಳಲಿ….
ಎಲ್ಲ ಲೋಕದ,
ನಾಕವಿದುವೆ ಪುಣ್ಯ, ಸಗ್ಗಕೆ ಭೂಮಿಕೆ,
ಜ್ಞಾನವೆಲ್ಲಕೂ
ಮೂಲವಿದುವೆ, ಧ್ಯಾನ ನಂದನ ಚಂದ್ರಿಕೆ,
ಧೃವಗಳೆಲ್ಲಕೂ
ಧೃವವ ತೋರಿದೆ ಈ ಮಣ್ಣಿನೆದೆಯ ಬಾಂದಳ,
ವಿಶ್ವನೇಹದೊಸುಗೆಗೆ
ಕೈಯ ಚಾಚಿದೆ ಕಂದದಂದದ ಜೋಗುಳ,
ಎಲ್ಲ ಸಂಸ್ಕೃತಿ ಸಾರವಿಲ್ಲಿ,
ಉತ್ಕೃತಿಯ ತೆರದ ಹರಹಿನಲ್ಹಬ್ಬಿದೆ
ನೂರು-ಸಾವಿರ-ಕೋಟಿ ತತ್ವವ
ಮಾನ್ಯ ಭಾವ ದೇಶದಿ ತಬ್ಬಿದೆ
ಬರಿಮಣ್ಣಲ್ಲದ
ಈ ಮಣ್ಣಲಿ ವಿಶ್ವದೈವದ ಬಲವಿದೆ,
ವ್ಯಷ್ಠಿಯಲ್ಲದ
ಸಮಷ್ಠಿಬಲದಲಿ ಜೀವನವು ತಾ ಸಾಗಿದೆ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಂಬಾರಕಿ ಈಕಿ ಕುಂಬಾರಕಿ
Next post ಕುರುವರಿಯದ ಕುಂಬಾರಗ ಹೇಳಲು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys