Home / ಕವನ / ಅನುವಾದ / ಥಿಯೇಟರ್ ಇಂಪ್ರೆಶನ್ಸ್

ಥಿಯೇಟರ್ ಇಂಪ್ರೆಶನ್ಸ್

ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ.
ರಂಗಮಂಚದ ಪುನರುಜ್ಜೀವನ.
ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು,
ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು,
ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು,
ಪ್ರೇಕ್ಷಕರಿಗೆ ಮುಖ ತೋರಿಸಲೆಂದು
ನಾಟಕದಲ್ಲಿ ಬದುಕಿದವರೊಡನೆ ಸತ್ತರೂ ಎದ್ದು ನಿಲ್ಲುವುದು.
ಪ್ರೇಕ್ಷಕರಿಗೆ ನಾಯಕರ ವಂದನೆ
ಸತ್ತನಾಯಕಿ ತನ್ನ ಬಿಳಿಯ ಕೈಯನ್ನು
ಎದೆಯ ಗಾಯಕ್ಕೆ ಮರೆಯಾಗಿ ಇಟ್ಟುಕೊಳ್ಳುತ್ತಾಳೆ.
ನೇಣಿಗೆ ಸಿಕ್ಕ ಕೊರಳು ಬಾಗಿ ನಮಿಸುತ್ತದೆ.
ಪ್ರೇಕ್ಷಕರಿಗೆ ಎಲ್ಲರ ನಮಸ್ಕಾರ…
ದುಷ್ಟತನ ಸಭ್ಯತೆಯ ಕೈ ಹಿಡಿಯುತ್ತದೆ.
ಶೂಲಕ್ಕೇರಿದವನು ಕೊಂದವನ ನೋಡಿ ನಗುತ್ತಾನೆ.
ಕ್ರಾಂತಿಕಾರಿ, ಇಷ್ಟೂ ಕೋಪವಿಲ್ಲದೆ,
ನಿರಂಕುಶನ ಬಳಿ ಸಾರಿ ಬೆನ್ನ ಮೇಲೆ ಕೈ ಇಡುತ್ತಾನೆ.
ಚಿನ್ನದ ಬಣ್ಣದ ಚಪ್ಪಲಿ ಅನಂತತೆಯತ್ತ ಹೆಜ್ಜೆಹಾಕುತ್ತದೆ.
ಬೀಸುತಿರುವ ಕೈಯಲ್ಲಿನ ಹ್ಯಾಟು ನೀತಿಯನ್ನು ಗುಡಿಸಿಹಾಕುತ್ತದೆ.
ನಾಳೆ ಮತ್ತೆಹೊಸದಾಗಲು ಎಲ್ಲ ಸಿದ್ಧ.
ಮೂರು, ನಾಲ್ಕನೆಯ ಅಂಕದಲ್ಲಿ ಮೊದಲು ಸತ್ತವರೆಲ್ಲ
ಒಬ್ಬರ ಹಿಂದೊಬ್ಬರು ಸಾಲಾಗಿ ಬರುತ್ತಾರೆ.
ಇಷ್ಟೂ ಸುಳಿವಿಲ್ಲದಂತೆ ಮಾಯವಾಗಿದ್ದವರು
ಪವಾಡವೆಂಬಂತೆ ಕಾಣಿಸಿಕೊಳ್ಳುತ್ತಾರೆ.
ಈ ಕ್ಷಣಕ್ಕಾಗಿಯೇ ಅವರೆಲ್ಲ
ಕಾಸ್ಟ್ಯೂಮು ತೆಗೆಯದೆ ಮೇಕಪ್ಪು ಅಳಿಸದೆ
ತಾಳ್ಮೆಯಿಂದ ಕಾಯುತ್ತಾ ಮರೆಯಲ್ಲಿ ನಿಂತಿದ್ದರಲ್ಲ
ಅದು ನನ್ನ ಮನಸ್ಸನ್ನು ಕರಗಿಸಿಬಿಡುತ್ತದೆ.
ಪರದೆ ಇಳಿಯುತ್ತಾ
ಇನ್ನೇನು ನೆಲ ಮುಟ್ಟುವ ಮೊದಲು
ಕಣ್ಣಿಗೆ ಒಂದಿಷ್ಟು ಕಾಣುತ್ತದಲ್ಲ
ಅದು ನಿಜವಾದ ರಸಾನುಭವ :
ಉದುರಿದ ಹೂವೆತ್ತಿಕೊಳ್ಳಲು ಆತುರದಿಂದ ಚಾಚುವ ಕೈ,
ಬಿದ್ದ ಕತ್ತಿ ಎತ್ತಿಕೊಳ್ಳಲು ಚಾಚುವ ಇನ್ನೊಂದು ಕೈ.
ಅದೃಶ್ಯವಾದ ಮೂರನೆಯ ಕೈ
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತದೆ
ನನ್ನ ಕತ್ತು ಹಿಸುಕುತ್ತದೆ.
*****
ಮೂ: ವಿಸ್ಲಾವ ಝ್ಯಿಂಬೋಸ್ಕ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...