Home / ಕವನ / ಅನುವಾದ / ಥಿಯೇಟರ್ ಇಂಪ್ರೆಶನ್ಸ್

ಥಿಯೇಟರ್ ಇಂಪ್ರೆಶನ್ಸ್

ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ.
ರಂಗಮಂಚದ ಪುನರುಜ್ಜೀವನ.
ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು,
ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು,
ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು,
ಪ್ರೇಕ್ಷಕರಿಗೆ ಮುಖ ತೋರಿಸಲೆಂದು
ನಾಟಕದಲ್ಲಿ ಬದುಕಿದವರೊಡನೆ ಸತ್ತರೂ ಎದ್ದು ನಿಲ್ಲುವುದು.
ಪ್ರೇಕ್ಷಕರಿಗೆ ನಾಯಕರ ವಂದನೆ
ಸತ್ತನಾಯಕಿ ತನ್ನ ಬಿಳಿಯ ಕೈಯನ್ನು
ಎದೆಯ ಗಾಯಕ್ಕೆ ಮರೆಯಾಗಿ ಇಟ್ಟುಕೊಳ್ಳುತ್ತಾಳೆ.
ನೇಣಿಗೆ ಸಿಕ್ಕ ಕೊರಳು ಬಾಗಿ ನಮಿಸುತ್ತದೆ.
ಪ್ರೇಕ್ಷಕರಿಗೆ ಎಲ್ಲರ ನಮಸ್ಕಾರ…
ದುಷ್ಟತನ ಸಭ್ಯತೆಯ ಕೈ ಹಿಡಿಯುತ್ತದೆ.
ಶೂಲಕ್ಕೇರಿದವನು ಕೊಂದವನ ನೋಡಿ ನಗುತ್ತಾನೆ.
ಕ್ರಾಂತಿಕಾರಿ, ಇಷ್ಟೂ ಕೋಪವಿಲ್ಲದೆ,
ನಿರಂಕುಶನ ಬಳಿ ಸಾರಿ ಬೆನ್ನ ಮೇಲೆ ಕೈ ಇಡುತ್ತಾನೆ.
ಚಿನ್ನದ ಬಣ್ಣದ ಚಪ್ಪಲಿ ಅನಂತತೆಯತ್ತ ಹೆಜ್ಜೆಹಾಕುತ್ತದೆ.
ಬೀಸುತಿರುವ ಕೈಯಲ್ಲಿನ ಹ್ಯಾಟು ನೀತಿಯನ್ನು ಗುಡಿಸಿಹಾಕುತ್ತದೆ.
ನಾಳೆ ಮತ್ತೆಹೊಸದಾಗಲು ಎಲ್ಲ ಸಿದ್ಧ.
ಮೂರು, ನಾಲ್ಕನೆಯ ಅಂಕದಲ್ಲಿ ಮೊದಲು ಸತ್ತವರೆಲ್ಲ
ಒಬ್ಬರ ಹಿಂದೊಬ್ಬರು ಸಾಲಾಗಿ ಬರುತ್ತಾರೆ.
ಇಷ್ಟೂ ಸುಳಿವಿಲ್ಲದಂತೆ ಮಾಯವಾಗಿದ್ದವರು
ಪವಾಡವೆಂಬಂತೆ ಕಾಣಿಸಿಕೊಳ್ಳುತ್ತಾರೆ.
ಈ ಕ್ಷಣಕ್ಕಾಗಿಯೇ ಅವರೆಲ್ಲ
ಕಾಸ್ಟ್ಯೂಮು ತೆಗೆಯದೆ ಮೇಕಪ್ಪು ಅಳಿಸದೆ
ತಾಳ್ಮೆಯಿಂದ ಕಾಯುತ್ತಾ ಮರೆಯಲ್ಲಿ ನಿಂತಿದ್ದರಲ್ಲ
ಅದು ನನ್ನ ಮನಸ್ಸನ್ನು ಕರಗಿಸಿಬಿಡುತ್ತದೆ.
ಪರದೆ ಇಳಿಯುತ್ತಾ
ಇನ್ನೇನು ನೆಲ ಮುಟ್ಟುವ ಮೊದಲು
ಕಣ್ಣಿಗೆ ಒಂದಿಷ್ಟು ಕಾಣುತ್ತದಲ್ಲ
ಅದು ನಿಜವಾದ ರಸಾನುಭವ :
ಉದುರಿದ ಹೂವೆತ್ತಿಕೊಳ್ಳಲು ಆತುರದಿಂದ ಚಾಚುವ ಕೈ,
ಬಿದ್ದ ಕತ್ತಿ ಎತ್ತಿಕೊಳ್ಳಲು ಚಾಚುವ ಇನ್ನೊಂದು ಕೈ.
ಅದೃಶ್ಯವಾದ ಮೂರನೆಯ ಕೈ
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತದೆ
ನನ್ನ ಕತ್ತು ಹಿಸುಕುತ್ತದೆ.
*****
ಮೂ: ವಿಸ್ಲಾವ ಝ್ಯಿಂಬೋಸ್ಕ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...