Home / ಕವನ / ಅನುವಾದ / ಥಿಯೇಟರ್ ಇಂಪ್ರೆಶನ್ಸ್

ಥಿಯೇಟರ್ ಇಂಪ್ರೆಶನ್ಸ್

ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ.
ರಂಗಮಂಚದ ಪುನರುಜ್ಜೀವನ.
ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು,
ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು,
ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು,
ಪ್ರೇಕ್ಷಕರಿಗೆ ಮುಖ ತೋರಿಸಲೆಂದು
ನಾಟಕದಲ್ಲಿ ಬದುಕಿದವರೊಡನೆ ಸತ್ತರೂ ಎದ್ದು ನಿಲ್ಲುವುದು.
ಪ್ರೇಕ್ಷಕರಿಗೆ ನಾಯಕರ ವಂದನೆ
ಸತ್ತನಾಯಕಿ ತನ್ನ ಬಿಳಿಯ ಕೈಯನ್ನು
ಎದೆಯ ಗಾಯಕ್ಕೆ ಮರೆಯಾಗಿ ಇಟ್ಟುಕೊಳ್ಳುತ್ತಾಳೆ.
ನೇಣಿಗೆ ಸಿಕ್ಕ ಕೊರಳು ಬಾಗಿ ನಮಿಸುತ್ತದೆ.
ಪ್ರೇಕ್ಷಕರಿಗೆ ಎಲ್ಲರ ನಮಸ್ಕಾರ…
ದುಷ್ಟತನ ಸಭ್ಯತೆಯ ಕೈ ಹಿಡಿಯುತ್ತದೆ.
ಶೂಲಕ್ಕೇರಿದವನು ಕೊಂದವನ ನೋಡಿ ನಗುತ್ತಾನೆ.
ಕ್ರಾಂತಿಕಾರಿ, ಇಷ್ಟೂ ಕೋಪವಿಲ್ಲದೆ,
ನಿರಂಕುಶನ ಬಳಿ ಸಾರಿ ಬೆನ್ನ ಮೇಲೆ ಕೈ ಇಡುತ್ತಾನೆ.
ಚಿನ್ನದ ಬಣ್ಣದ ಚಪ್ಪಲಿ ಅನಂತತೆಯತ್ತ ಹೆಜ್ಜೆಹಾಕುತ್ತದೆ.
ಬೀಸುತಿರುವ ಕೈಯಲ್ಲಿನ ಹ್ಯಾಟು ನೀತಿಯನ್ನು ಗುಡಿಸಿಹಾಕುತ್ತದೆ.
ನಾಳೆ ಮತ್ತೆಹೊಸದಾಗಲು ಎಲ್ಲ ಸಿದ್ಧ.
ಮೂರು, ನಾಲ್ಕನೆಯ ಅಂಕದಲ್ಲಿ ಮೊದಲು ಸತ್ತವರೆಲ್ಲ
ಒಬ್ಬರ ಹಿಂದೊಬ್ಬರು ಸಾಲಾಗಿ ಬರುತ್ತಾರೆ.
ಇಷ್ಟೂ ಸುಳಿವಿಲ್ಲದಂತೆ ಮಾಯವಾಗಿದ್ದವರು
ಪವಾಡವೆಂಬಂತೆ ಕಾಣಿಸಿಕೊಳ್ಳುತ್ತಾರೆ.
ಈ ಕ್ಷಣಕ್ಕಾಗಿಯೇ ಅವರೆಲ್ಲ
ಕಾಸ್ಟ್ಯೂಮು ತೆಗೆಯದೆ ಮೇಕಪ್ಪು ಅಳಿಸದೆ
ತಾಳ್ಮೆಯಿಂದ ಕಾಯುತ್ತಾ ಮರೆಯಲ್ಲಿ ನಿಂತಿದ್ದರಲ್ಲ
ಅದು ನನ್ನ ಮನಸ್ಸನ್ನು ಕರಗಿಸಿಬಿಡುತ್ತದೆ.
ಪರದೆ ಇಳಿಯುತ್ತಾ
ಇನ್ನೇನು ನೆಲ ಮುಟ್ಟುವ ಮೊದಲು
ಕಣ್ಣಿಗೆ ಒಂದಿಷ್ಟು ಕಾಣುತ್ತದಲ್ಲ
ಅದು ನಿಜವಾದ ರಸಾನುಭವ :
ಉದುರಿದ ಹೂವೆತ್ತಿಕೊಳ್ಳಲು ಆತುರದಿಂದ ಚಾಚುವ ಕೈ,
ಬಿದ್ದ ಕತ್ತಿ ಎತ್ತಿಕೊಳ್ಳಲು ಚಾಚುವ ಇನ್ನೊಂದು ಕೈ.
ಅದೃಶ್ಯವಾದ ಮೂರನೆಯ ಕೈ
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತದೆ
ನನ್ನ ಕತ್ತು ಹಿಸುಕುತ್ತದೆ.
*****
ಮೂ: ವಿಸ್ಲಾವ ಝ್ಯಿಂಬೋಸ್ಕ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...