ಕೋರಿಕೆ

ನೆರಳಲ್ಲಿ ನಿಂತು, ಸಾವಿರಬಾರಿ,
ಇದೆಲ್ಲ ನಡೆಯುವುದು, ನೋಡಿದ್ದೇನೆ.
ಕಳ್ಳತನ ಮೊದಲು, ಕೊಲೆ ಆಮೇಲೆ,
ಮಾನಭಂಗ, ನಂತರ ಕುರುಡು ಕೈಯ ದಾರುಣ ಕೃತ್ಯಗಳು.
ಪ್ರತಿ ಬಾರಿ ಹೊಸತಾಗಿ ಪ್ರಾರ್ಥಿಸಿದ್ದೇನೆ,
ಇಲ್ಲವೆ ಹಳೆಯ ಪ್ರಾರ್ಥನೆಯನ್ನೆ ಹೊಸದಾಗಿ ಹೇಳಿದ್ದೇನೆ.
ನೋವಿನಲ್ಲಿ ಕವಿತೆ ಹುಡುಕುತ್ತ
ನನ್ನ ಆತ್ಮದ ಬೆಲೆ ತೆತ್ತು
ಮೌನವೆ ಉತ್ತಮವೆಂದು ತಿಳಿದಿದ್ದೇನೆ.
ನಾನು ಕೇವಲ ಕಣ್ಣುಮಾತ್ರ
ಒಳಿತು ಸೋಲುತ್ತಿರುವುದರ ಸಾಕ್ಷಿ;
ಹುಟ್ಟಿದ ಮಕ್ಕಳ ಸೌಂದರ್ಯ ಕಾಣುತ್ತ
ಕ್ಯಾನ್ಸರ್ ಕಾದಿರುವುದು ತಿಳಿದಿದ್ದೇನೆ.
ಬದುಕನ್ನು ಇತ್ಯರ್ಥ ಮಾಡುವವನಲ್ಲಿ
ನನ್ನದೊಂದೇ ಕೋರಿಕೆ :
ಸತ್ಯ ಸುಂದರವಾಗಲಿ.

ಮಂಜೂರಾಗಲಿಲ್ಲ.
*****
ಮೂಲ: ಆರ್ ಎಸ್ ಥಾಮಸ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಮುರಳಿಗೆ ಕೊರಳ ತೂಗಲಿ
Next post ಮದುವೆಯ ಏಜಂಟ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…