ನಿನ್ನಿಷ್ಟ

ದುಡ್ಡಿದ್ದರೆ ಉಂಗುರ ತಗೋ
ಇಲ್ಲದಿದ್ದರೆ ತುಟಿಯ ತುದಿಯ ಮುತ್ತುಕೊಡು.
ಏನೂ ತೋಚದಿದ್ದರೆ ನನ್ನೊಡನೆ ಬಾ.
ಆಮೇಲೆ ಯಾಕೆಬಂದೆನೋ ಅನ್ನಬಾರದು, ಅಷ್ಟೆ.
ಬೆಳಗಿನಲ್ಲಿ ಸೌದೆ ಆರಿಸುತ್ತೀ.
ನಿನ್ನ ಕೈಯಲ್ಲಿ ಅವು ಹೂಗಳಾಗುತ್ತವೆ.
ದಳ ಎತ್ತಿಕೊಳ್ಳುತ್ತಿದ್ದಂತೆ ನಿನ್ನಕೈ ಹಿಡಿಯುವೆ.
ಒಪ್ಪಿದರೆ ನಿನ್ನ ಪರಿಮಳ ನನ್ನದಾಗುತ್ತದೆ.
ಹೇಳಿಬಿಟ್ಟಿದ್ದೇನೆ.
ಹೋಗಬೇಕೆನಿಸಿದರೆ, ಅದೋ ಅದೇ ದಾರಿ.
ನನ್ನಹೆಸರೆ ಅದರ ಹೆಸರು.
ಹಾಗೇ ಹೋದರೆ ನಿನಗೆ ಸಿಗುವುದು ಕಣ್ಣೀರು.
*****
ಮೂಲ: ಏಂಜೆಲ್ ಗೊನ್ಸಾಲೆಝ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯ ರಮೆಯೊ ಜೊನ್ನ ಉಮೆಯೊ
Next post ಸತ್ಯಾಗ್ರಹಗಳು

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…