ದುಡ್ಡಿದ್ದರೆ ಉಂಗುರ ತಗೋ
ಇಲ್ಲದಿದ್ದರೆ ತುಟಿಯ ತುದಿಯ ಮುತ್ತುಕೊಡು.
ಏನೂ ತೋಚದಿದ್ದರೆ ನನ್ನೊಡನೆ ಬಾ.
ಆಮೇಲೆ ಯಾಕೆಬಂದೆನೋ ಅನ್ನಬಾರದು, ಅಷ್ಟೆ.
ಬೆಳಗಿನಲ್ಲಿ ಸೌದೆ ಆರಿಸುತ್ತೀ.
ನಿನ್ನ ಕೈಯಲ್ಲಿ ಅವು ಹೂಗಳಾಗುತ್ತವೆ.
ದಳ ಎತ್ತಿಕೊಳ್ಳುತ್ತಿದ್ದಂತೆ ನಿನ್ನಕೈ ಹಿಡಿಯುವೆ.
ಒಪ್ಪಿದರೆ ನಿನ್ನ ಪರಿಮಳ ನನ್ನದಾಗುತ್ತದೆ.
ಹೇಳಿಬಿಟ್ಟಿದ್ದೇನೆ.
ಹೋಗಬೇಕೆನಿಸಿದರೆ, ಅದೋ ಅದೇ ದಾರಿ.
ನನ್ನಹೆಸರೆ ಅದರ ಹೆಸರು.
ಹಾಗೇ ಹೋದರೆ ನಿನಗೆ ಸಿಗುವುದು ಕಣ್ಣೀರು.
*****
ಮೂಲ: ಏಂಜೆಲ್ ಗೊನ್ಸಾಲೆಝ್
Related Post
ಸಣ್ಣ ಕತೆ
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…