Home / ಕವನ / ಅನುವಾದ / ಕಾವ್ಯ

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ
ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು.
ಗೊತಿಲ್ಲ, ನನಗೆ ಗೊತಿಲ್ಲ
ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ,
ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ.
ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ.
ಬೀದಿಯಲ್ಲಿದ್ದ ನನ್ನನ್ನು ಕರೆಯಿತು.
ಕತ್ತಲ ಕೊಂಬೆಗೆ ಜೋತುಬಿದ್ದವನನ್ನು,
ಬೆಂಕಿಯುರಿಯಲ್ಲಿದ್ದವನನ್ನು,
ಒಬ್ಬನೇ ವಾಪಸ್ಸು ಹೋಗುತ್ತಿದ್ದವನನ್ನು,
ಸಾವಿರ ಜನರಲ್ಲಿ ಒಬ್ಬನಾಗಿ ಮುಖವಿಲ್ಲದಿದ್ದವನನ್ನು,
ಕರೆದು ಮೈದಡವಿತು.

ಏನು ಹೇಳಲಿ? ತಿಳಿಯಲಿಲ್ಲ,
ನಾಲಗೆಯಲ್ಲಿಶಬ್ದವಿರಲಿಲ್ಲ, ಕಣ್ಣಲ್ಲಿ ಬೆಳಕಿರಲಿಲ್ಲ.
ಜ್ವರವೋ, ಹಾರಲು ಮರೆತ ರೆಕ್ಕೆಗಳೋ
ನನ್ನ ಮನಸ್ಸಿನೊಳಗೇನೋ ಚಲನೆ.

ಒಳಗಿನ ಕಿಡಿಯ ಬೆಳಕಿನಲ್ಲಿ
ಒಂದಿಷ್ಟು ದಾರಿಮಾಡಿಕೊಂಡೆ.
ಮೊದಲ ಸಾಲು ಬರೆದೆ.
ಅಸ್ಪಷ್ಟ, ಅರ್ಥಹೀನ, ಅಶಕ್ತಸಾಲು,
ಏನೇನೂ ಗೊತ್ತಿಲ್ಲದವನ
ಶುದ್ಧ ವ್ಯರ್‍ಥಾಲಾಪ, ಶುದ್ಧ ಜ್ಞಾನ.

ತಟ್ಟನೆ ಆಕಾಶದ ಚಿಲಕ ತೆಗೆದು
ಗ್ರಹ ತಾರೆಗಳು ಮೈದೆರೆದು
ಸುತ್ತಿಕೊಂಡ ಕತ್ತಲಲ್ಲಿ
ಜಗದ ಮೇಲೆ
ಬಾಣ, ಬೆಂಕಿ, ಹೂಗಳ ಒಗಟು ತೂರುವ
ನೆರಳ ರಂಧ್ರಗಳು.
ನಾನು, ಅಣುವಿನಣುವಿನಣುವಾದ ನಾನು
ನಕ್ಷತ್ರ ಖಚಿತ ಮಹಾ ಶೂನ್ಯವನ್ನು
ಅಗಾಧ ರಹಸ್ಯದ ಬಿಂಬವನ್ನು ಹೀರಿ
ಪರಿಶುದ್ಧ ಬಯಲ ಅಂಶವಾಗಿ
ನಕ್ಷತ್ರಗಳೊಡನೆ ಹೊರಳಿದೆ.
ನನ್ನೆದೆ ಭಾವ ಗಾಳಿಯೊಡನೆ ತೇಲಿತು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...