Home / ಕವನ / ಅನುವಾದ / ಕಾವ್ಯ

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ
ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು.
ಗೊತಿಲ್ಲ, ನನಗೆ ಗೊತಿಲ್ಲ
ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ,
ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ.
ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ.
ಬೀದಿಯಲ್ಲಿದ್ದ ನನ್ನನ್ನು ಕರೆಯಿತು.
ಕತ್ತಲ ಕೊಂಬೆಗೆ ಜೋತುಬಿದ್ದವನನ್ನು,
ಬೆಂಕಿಯುರಿಯಲ್ಲಿದ್ದವನನ್ನು,
ಒಬ್ಬನೇ ವಾಪಸ್ಸು ಹೋಗುತ್ತಿದ್ದವನನ್ನು,
ಸಾವಿರ ಜನರಲ್ಲಿ ಒಬ್ಬನಾಗಿ ಮುಖವಿಲ್ಲದಿದ್ದವನನ್ನು,
ಕರೆದು ಮೈದಡವಿತು.

ಏನು ಹೇಳಲಿ? ತಿಳಿಯಲಿಲ್ಲ,
ನಾಲಗೆಯಲ್ಲಿಶಬ್ದವಿರಲಿಲ್ಲ, ಕಣ್ಣಲ್ಲಿ ಬೆಳಕಿರಲಿಲ್ಲ.
ಜ್ವರವೋ, ಹಾರಲು ಮರೆತ ರೆಕ್ಕೆಗಳೋ
ನನ್ನ ಮನಸ್ಸಿನೊಳಗೇನೋ ಚಲನೆ.

ಒಳಗಿನ ಕಿಡಿಯ ಬೆಳಕಿನಲ್ಲಿ
ಒಂದಿಷ್ಟು ದಾರಿಮಾಡಿಕೊಂಡೆ.
ಮೊದಲ ಸಾಲು ಬರೆದೆ.
ಅಸ್ಪಷ್ಟ, ಅರ್ಥಹೀನ, ಅಶಕ್ತಸಾಲು,
ಏನೇನೂ ಗೊತ್ತಿಲ್ಲದವನ
ಶುದ್ಧ ವ್ಯರ್‍ಥಾಲಾಪ, ಶುದ್ಧ ಜ್ಞಾನ.

ತಟ್ಟನೆ ಆಕಾಶದ ಚಿಲಕ ತೆಗೆದು
ಗ್ರಹ ತಾರೆಗಳು ಮೈದೆರೆದು
ಸುತ್ತಿಕೊಂಡ ಕತ್ತಲಲ್ಲಿ
ಜಗದ ಮೇಲೆ
ಬಾಣ, ಬೆಂಕಿ, ಹೂಗಳ ಒಗಟು ತೂರುವ
ನೆರಳ ರಂಧ್ರಗಳು.
ನಾನು, ಅಣುವಿನಣುವಿನಣುವಾದ ನಾನು
ನಕ್ಷತ್ರ ಖಚಿತ ಮಹಾ ಶೂನ್ಯವನ್ನು
ಅಗಾಧ ರಹಸ್ಯದ ಬಿಂಬವನ್ನು ಹೀರಿ
ಪರಿಶುದ್ಧ ಬಯಲ ಅಂಶವಾಗಿ
ನಕ್ಷತ್ರಗಳೊಡನೆ ಹೊರಳಿದೆ.
ನನ್ನೆದೆ ಭಾವ ಗಾಳಿಯೊಡನೆ ತೇಲಿತು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...