Home / ಕವನ / ಅನುವಾದ / ಕಾವ್ಯ

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ
ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು.
ಗೊತಿಲ್ಲ, ನನಗೆ ಗೊತಿಲ್ಲ
ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ,
ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ.
ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ.
ಬೀದಿಯಲ್ಲಿದ್ದ ನನ್ನನ್ನು ಕರೆಯಿತು.
ಕತ್ತಲ ಕೊಂಬೆಗೆ ಜೋತುಬಿದ್ದವನನ್ನು,
ಬೆಂಕಿಯುರಿಯಲ್ಲಿದ್ದವನನ್ನು,
ಒಬ್ಬನೇ ವಾಪಸ್ಸು ಹೋಗುತ್ತಿದ್ದವನನ್ನು,
ಸಾವಿರ ಜನರಲ್ಲಿ ಒಬ್ಬನಾಗಿ ಮುಖವಿಲ್ಲದಿದ್ದವನನ್ನು,
ಕರೆದು ಮೈದಡವಿತು.

ಏನು ಹೇಳಲಿ? ತಿಳಿಯಲಿಲ್ಲ,
ನಾಲಗೆಯಲ್ಲಿಶಬ್ದವಿರಲಿಲ್ಲ, ಕಣ್ಣಲ್ಲಿ ಬೆಳಕಿರಲಿಲ್ಲ.
ಜ್ವರವೋ, ಹಾರಲು ಮರೆತ ರೆಕ್ಕೆಗಳೋ
ನನ್ನ ಮನಸ್ಸಿನೊಳಗೇನೋ ಚಲನೆ.

ಒಳಗಿನ ಕಿಡಿಯ ಬೆಳಕಿನಲ್ಲಿ
ಒಂದಿಷ್ಟು ದಾರಿಮಾಡಿಕೊಂಡೆ.
ಮೊದಲ ಸಾಲು ಬರೆದೆ.
ಅಸ್ಪಷ್ಟ, ಅರ್ಥಹೀನ, ಅಶಕ್ತಸಾಲು,
ಏನೇನೂ ಗೊತ್ತಿಲ್ಲದವನ
ಶುದ್ಧ ವ್ಯರ್‍ಥಾಲಾಪ, ಶುದ್ಧ ಜ್ಞಾನ.

ತಟ್ಟನೆ ಆಕಾಶದ ಚಿಲಕ ತೆಗೆದು
ಗ್ರಹ ತಾರೆಗಳು ಮೈದೆರೆದು
ಸುತ್ತಿಕೊಂಡ ಕತ್ತಲಲ್ಲಿ
ಜಗದ ಮೇಲೆ
ಬಾಣ, ಬೆಂಕಿ, ಹೂಗಳ ಒಗಟು ತೂರುವ
ನೆರಳ ರಂಧ್ರಗಳು.
ನಾನು, ಅಣುವಿನಣುವಿನಣುವಾದ ನಾನು
ನಕ್ಷತ್ರ ಖಚಿತ ಮಹಾ ಶೂನ್ಯವನ್ನು
ಅಗಾಧ ರಹಸ್ಯದ ಬಿಂಬವನ್ನು ಹೀರಿ
ಪರಿಶುದ್ಧ ಬಯಲ ಅಂಶವಾಗಿ
ನಕ್ಷತ್ರಗಳೊಡನೆ ಹೊರಳಿದೆ.
ನನ್ನೆದೆ ಭಾವ ಗಾಳಿಯೊಡನೆ ತೇಲಿತು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...