Home / ಕವನ / ಅನುವಾದ / ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ ಬಯಸಿದ್ದನ್ನೆಲ್ಲಾ ಮಾಡುವುದಕ್ಕೆ ಕಾಲವಿಲ್ಲ,
ಇಷ್ಟಪಟ್ಟದ್ದನ್ನೆಲ್ಲಾ ಪಡೆಯುವುದಕ್ಕೆ ಅವಕಾಶವಿಲ್ಲ…
ಹೀಗಂದದ್ದು ಎಕ್ಲೀಸಿಯಾಸ್ಪರ ತಪ್ಪು.
ಈಗ ಮನುಷ್ಯ ಏಕ ಕಾಲದಲ್ಲೇ ಪ್ರೀತಿಸಬೇಕು, ದ್ವೇಷಿಸಬೇಕು.
ಅಳುವುದಕ್ಕೂ ನಗುವುದಕ್ಕೂ ಅವೇ ಎರಡೇ ಕಣ್ಣು.
ಕಲ್ಲು ಎತ್ತಿಕೊಳ್ಳುವುದಕ್ಕೂ ಮತ್ತೆ ಎಸೆಯುವುದಕ್ಕೂ ಅವೇ ಎರಡೇ ಕೈ,
ಮನುಷ್ಯ ಪ್ರೀತಿಯಲ್ಲಿ ಯುದ್ಧ, ಮತ್ತೆ ಯುದ್ದದಲ್ಲೇ ಪ್ರೀತಿ ಮಾಡಬೇಕು.
ಚರಿತ್ರೆಗೆ ಎಷ್ಟೋ ಶತಮಾನದ ಹಿಡಿದದ್ದನ್ನು
ತನ್ನ ಆಯುಷ್ಯದಲ್ಲೆ ದ್ವೇಷಿಸಬೇಕು ಕ್ಷಮಿಸಬೇಕು,
ನೆನೆಯಬೇಕು ಮತ್ತೆ ಮರೆಯಬೇಕು,
ವ್ಯವಸ್ಥೆಗೊಳಿಸಿ ಅವ್ಯವಸ್ಥೆಗೊಳಿಸಿ, ತಿನ್ನಬೇಕು ಮತ್ತೆ ಅರಗಿಸಿಕೊಳ್ಳಬೇಕು.
ಹುಡುಕಿದ್ದನ್ನು ಕಳೆದುಕೊಳ್ಳುತ್ತಾ
ಸಿಕ್ಕಿದಾಗ ಮರೆಯುತ್ತಾ
ಮರೆತಾಗ ಪ್ರೀತಿಸುತ್ತಾ
ಪ್ರೀತಿಸಿದಾಗ ಮರೆಯುತ್ತಾ ಇರುವಾಗ
ಮನುಷ್ಯನ ಬದುಕಿನಲ್ಲಿ ಯಾವುದಕ್ಕೂ ಸಮಯವೇ ಇಲ್ಲ
ಆತ್ಮಸದಾ ಜ್ಞಾನಿ, ಸದಾ ಪರಿಣತ,
ಆದರೆ ದೇಹ ಮಾತ್ರ ಸದಾಕಾಲಕ್ಕೂ ಹವ್ಯಾಸಿ :
ಪ್ರಯತ್ನ ಪಡುತ್ತದೆ, ತಡಕಾಡುತ್ತದೆ, ಎಡವುತ್ತದೆ.
ಏನೂ ಕಲಿಯದೆ ಎಲ್ಲ ಗೊಂದಲ,
ನೋವಿನಲ್ಲೂ ನಲಿವಿನಲ್ಲೂ ಕುಡಿದು ಮತ್ತ, ಕುರುಡ.
ಶರತ್ ಕಾಲದ ಅಂಜೂರದಂತೆ ಸಾಯುತ್ತಾನೆ ಮನುಷ್ಯ.
ಒಣಗಿ, ಕುಗ್ಗಿ ಸಿಹಿಯಾಗಿ, ತನ್ನೊಳಗೆ ತಾನೇ ತುಂಬಿ.
ಉದುರಿದ ಎಲೆಗಳು ಒಣಗುತ್ತವೆ;
ಒಣ ಬತ್ತಲೆ ರೆಂಬೆಗಳು
ಎಲ್ಲಕ್ಕೂ ಯಾವಾಗಲೂ ಸಮಯವೇ ಸಮಯವಿರುವ
ತಾಣದತ್ತ ಬೆರಳು ಮಾಡಿತೋರುತ್ತವೆ.
*****
ಮೂಲ: ಯೆಹೂದಾ ಅಮಿಛಾಯ್

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...