Home / ಕವನ / ಅನುವಾದ / ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ ಬಯಸಿದ್ದನ್ನೆಲ್ಲಾ ಮಾಡುವುದಕ್ಕೆ ಕಾಲವಿಲ್ಲ,
ಇಷ್ಟಪಟ್ಟದ್ದನ್ನೆಲ್ಲಾ ಪಡೆಯುವುದಕ್ಕೆ ಅವಕಾಶವಿಲ್ಲ…
ಹೀಗಂದದ್ದು ಎಕ್ಲೀಸಿಯಾಸ್ಪರ ತಪ್ಪು.
ಈಗ ಮನುಷ್ಯ ಏಕ ಕಾಲದಲ್ಲೇ ಪ್ರೀತಿಸಬೇಕು, ದ್ವೇಷಿಸಬೇಕು.
ಅಳುವುದಕ್ಕೂ ನಗುವುದಕ್ಕೂ ಅವೇ ಎರಡೇ ಕಣ್ಣು.
ಕಲ್ಲು ಎತ್ತಿಕೊಳ್ಳುವುದಕ್ಕೂ ಮತ್ತೆ ಎಸೆಯುವುದಕ್ಕೂ ಅವೇ ಎರಡೇ ಕೈ,
ಮನುಷ್ಯ ಪ್ರೀತಿಯಲ್ಲಿ ಯುದ್ಧ, ಮತ್ತೆ ಯುದ್ದದಲ್ಲೇ ಪ್ರೀತಿ ಮಾಡಬೇಕು.
ಚರಿತ್ರೆಗೆ ಎಷ್ಟೋ ಶತಮಾನದ ಹಿಡಿದದ್ದನ್ನು
ತನ್ನ ಆಯುಷ್ಯದಲ್ಲೆ ದ್ವೇಷಿಸಬೇಕು ಕ್ಷಮಿಸಬೇಕು,
ನೆನೆಯಬೇಕು ಮತ್ತೆ ಮರೆಯಬೇಕು,
ವ್ಯವಸ್ಥೆಗೊಳಿಸಿ ಅವ್ಯವಸ್ಥೆಗೊಳಿಸಿ, ತಿನ್ನಬೇಕು ಮತ್ತೆ ಅರಗಿಸಿಕೊಳ್ಳಬೇಕು.
ಹುಡುಕಿದ್ದನ್ನು ಕಳೆದುಕೊಳ್ಳುತ್ತಾ
ಸಿಕ್ಕಿದಾಗ ಮರೆಯುತ್ತಾ
ಮರೆತಾಗ ಪ್ರೀತಿಸುತ್ತಾ
ಪ್ರೀತಿಸಿದಾಗ ಮರೆಯುತ್ತಾ ಇರುವಾಗ
ಮನುಷ್ಯನ ಬದುಕಿನಲ್ಲಿ ಯಾವುದಕ್ಕೂ ಸಮಯವೇ ಇಲ್ಲ
ಆತ್ಮಸದಾ ಜ್ಞಾನಿ, ಸದಾ ಪರಿಣತ,
ಆದರೆ ದೇಹ ಮಾತ್ರ ಸದಾಕಾಲಕ್ಕೂ ಹವ್ಯಾಸಿ :
ಪ್ರಯತ್ನ ಪಡುತ್ತದೆ, ತಡಕಾಡುತ್ತದೆ, ಎಡವುತ್ತದೆ.
ಏನೂ ಕಲಿಯದೆ ಎಲ್ಲ ಗೊಂದಲ,
ನೋವಿನಲ್ಲೂ ನಲಿವಿನಲ್ಲೂ ಕುಡಿದು ಮತ್ತ, ಕುರುಡ.
ಶರತ್ ಕಾಲದ ಅಂಜೂರದಂತೆ ಸಾಯುತ್ತಾನೆ ಮನುಷ್ಯ.
ಒಣಗಿ, ಕುಗ್ಗಿ ಸಿಹಿಯಾಗಿ, ತನ್ನೊಳಗೆ ತಾನೇ ತುಂಬಿ.
ಉದುರಿದ ಎಲೆಗಳು ಒಣಗುತ್ತವೆ;
ಒಣ ಬತ್ತಲೆ ರೆಂಬೆಗಳು
ಎಲ್ಲಕ್ಕೂ ಯಾವಾಗಲೂ ಸಮಯವೇ ಸಮಯವಿರುವ
ತಾಣದತ್ತ ಬೆರಳು ಮಾಡಿತೋರುತ್ತವೆ.
*****
ಮೂಲ: ಯೆಹೂದಾ ಅಮಿಛಾಯ್

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...