Home / ಕವನ / ಅನುವಾದ / ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ ಬಯಸಿದ್ದನ್ನೆಲ್ಲಾ ಮಾಡುವುದಕ್ಕೆ ಕಾಲವಿಲ್ಲ,
ಇಷ್ಟಪಟ್ಟದ್ದನ್ನೆಲ್ಲಾ ಪಡೆಯುವುದಕ್ಕೆ ಅವಕಾಶವಿಲ್ಲ…
ಹೀಗಂದದ್ದು ಎಕ್ಲೀಸಿಯಾಸ್ಪರ ತಪ್ಪು.
ಈಗ ಮನುಷ್ಯ ಏಕ ಕಾಲದಲ್ಲೇ ಪ್ರೀತಿಸಬೇಕು, ದ್ವೇಷಿಸಬೇಕು.
ಅಳುವುದಕ್ಕೂ ನಗುವುದಕ್ಕೂ ಅವೇ ಎರಡೇ ಕಣ್ಣು.
ಕಲ್ಲು ಎತ್ತಿಕೊಳ್ಳುವುದಕ್ಕೂ ಮತ್ತೆ ಎಸೆಯುವುದಕ್ಕೂ ಅವೇ ಎರಡೇ ಕೈ,
ಮನುಷ್ಯ ಪ್ರೀತಿಯಲ್ಲಿ ಯುದ್ಧ, ಮತ್ತೆ ಯುದ್ದದಲ್ಲೇ ಪ್ರೀತಿ ಮಾಡಬೇಕು.
ಚರಿತ್ರೆಗೆ ಎಷ್ಟೋ ಶತಮಾನದ ಹಿಡಿದದ್ದನ್ನು
ತನ್ನ ಆಯುಷ್ಯದಲ್ಲೆ ದ್ವೇಷಿಸಬೇಕು ಕ್ಷಮಿಸಬೇಕು,
ನೆನೆಯಬೇಕು ಮತ್ತೆ ಮರೆಯಬೇಕು,
ವ್ಯವಸ್ಥೆಗೊಳಿಸಿ ಅವ್ಯವಸ್ಥೆಗೊಳಿಸಿ, ತಿನ್ನಬೇಕು ಮತ್ತೆ ಅರಗಿಸಿಕೊಳ್ಳಬೇಕು.
ಹುಡುಕಿದ್ದನ್ನು ಕಳೆದುಕೊಳ್ಳುತ್ತಾ
ಸಿಕ್ಕಿದಾಗ ಮರೆಯುತ್ತಾ
ಮರೆತಾಗ ಪ್ರೀತಿಸುತ್ತಾ
ಪ್ರೀತಿಸಿದಾಗ ಮರೆಯುತ್ತಾ ಇರುವಾಗ
ಮನುಷ್ಯನ ಬದುಕಿನಲ್ಲಿ ಯಾವುದಕ್ಕೂ ಸಮಯವೇ ಇಲ್ಲ
ಆತ್ಮಸದಾ ಜ್ಞಾನಿ, ಸದಾ ಪರಿಣತ,
ಆದರೆ ದೇಹ ಮಾತ್ರ ಸದಾಕಾಲಕ್ಕೂ ಹವ್ಯಾಸಿ :
ಪ್ರಯತ್ನ ಪಡುತ್ತದೆ, ತಡಕಾಡುತ್ತದೆ, ಎಡವುತ್ತದೆ.
ಏನೂ ಕಲಿಯದೆ ಎಲ್ಲ ಗೊಂದಲ,
ನೋವಿನಲ್ಲೂ ನಲಿವಿನಲ್ಲೂ ಕುಡಿದು ಮತ್ತ, ಕುರುಡ.
ಶರತ್ ಕಾಲದ ಅಂಜೂರದಂತೆ ಸಾಯುತ್ತಾನೆ ಮನುಷ್ಯ.
ಒಣಗಿ, ಕುಗ್ಗಿ ಸಿಹಿಯಾಗಿ, ತನ್ನೊಳಗೆ ತಾನೇ ತುಂಬಿ.
ಉದುರಿದ ಎಲೆಗಳು ಒಣಗುತ್ತವೆ;
ಒಣ ಬತ್ತಲೆ ರೆಂಬೆಗಳು
ಎಲ್ಲಕ್ಕೂ ಯಾವಾಗಲೂ ಸಮಯವೇ ಸಮಯವಿರುವ
ತಾಣದತ್ತ ಬೆರಳು ಮಾಡಿತೋರುತ್ತವೆ.
*****
ಮೂಲ: ಯೆಹೂದಾ ಅಮಿಛಾಯ್

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...