Home / ಕವನ / ಅನುವಾದ / ಚಹರೆಪಟ್ಟಿ

ಚಹರೆಪಟ್ಟಿ

ರಿಕಾರ್ಡು ಬರೆದುಕೋ.
ನಾನು ಅರಬ.
ನನ್ನ ಕಾರ್ಡಿನ ನಂಬರು ಐವತ್ತುಸಾವಿರ.
ಎಂಟು ಮಕ್ಕಳು.
ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ.
ಇದಕ್ಕೆ ಕೋಪ ಯಾಕೆ?
ರಿಕಾರ್ಡು ಬರೆದುಕೋ.

ನಾನು ಅರಬ
ಗೆಳೆಯರೊಡನೆ ಕಲ್ಲಿನ ಕ್ವಾರಿಯಲ್ಲಿ ಕೆಲಸ.
ಎಂಟು ಮಕ್ಕಳು.
ಅವರ ಬ್ರೆಡ್ಡಿಗೆ, ಬಟ್ಟೆಗೆ, ಸ್ಕೂಲು ಪುಸ್ತಕಕ್ಕೆ
ಕಲ್ಲು ಕದಿಯುತ್ತೇನೆ.
ನಿಮ್ಮ ಮನೆ ಬಾಗಿಲಿಗೆ ಭಿಕ್ಷಕ್ಕೆ ಬಂದಿಲ್ಲವಲ್ಲ,
ನಿಮ್ಮಕಾಲಿಗೆ ಬಿದ್ದು ಬೇಡಿಲ್ಲವಲ್ಲ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ಬಿರುದಿಲ್ಲದ ಹೆಸರಿನವನು,
ಕೋಪದ ಸುಳಿಗೆ ಸಿಕ್ಕ ದೇಶದಲ್ಲಿ
ತಾಳ್ಮೆಯಿಂದ ಇರುವವನು.
ನನ್ನ ಬೇರು ಕಾಲದ ಆದಿಗಿಂತ ಹಳೆಯದು.
ಸಮುದ್ರಗಳು ಹುಟ್ಟುವ ಮುನ್ನ
ಸೈಪ್ರಸ್ಸು ಆಲಿವ್ವು ಮರಗಳು ಹುಟ್ಟುವ ಮುನ್ನ
ಜೊಂಡು ಬೆಳೆಯುವ ಮುನ್ನ
ಮುನ್ನ ಎಂಬ ಮುನ್ನ ಬೇರು ಬಿಟ್ಟಿದ್ದೆ.
ನಮ್ಮಪ್ಪ ನೇಗಿಲ ಕುಲದಿಂದ ಬಂದವನು,
ಶ್ರೀಮಂತ ಸರದಾರನಲ್ಲ,
ನಮ್ಮ ತಾತನೂ ರೈತ.
ವಂಶವೃಕ್ಷವಿಲ್ಲದವನು.
ನಮ್ಮ ಮನೆ
ಕೋಲು ಹೂತು ಹುಲ್ಲು ಹೊದಿಸಿದ ಗುಡಿಸಲು.
ನನ್ನ ಸ್ಥಿತಿಯಿಂದ ಸಮಾಧಾನವಾಯಿತೇ?
ನನ್ನ ಹೆಸರಿನ ಜೊತೆಗೆ ಮನೆತನದ ಹೆಸರು ಇಲ್ಲ.
ರಿಕಾರ್ಡು ಬರೆದುಕೋ.

ನಾನು ಅರಬ.
ಕೂದಲ ಬಣ್ಣ : ದಟ್ಟ ಕಪ್ಪು.
ಕಣ್ಣಿನ ಬಣ್ಣ : ಕಂದು.
ನನ್ನ ಗುರುತಿನ ಚಹರೆ : ನೆತ್ತಿಯ ಮೇಲೆ
ಮುಟ್ಟಿದವರ ಕೈ ಸೀಯಿಸಿಬಿಡುವ
ಮಂತ್ರಾಕ್ಷರಗಳಿವೆ ‘ಇಖಾಲ್’ ನೊಡನೆ ‘ಖೆಫಿಯೆ’
ನನ್ನವಿಳಾಸ : ದೂರದ, ಎಲ್ಲರೂ ಮರೆತ, ಹೆಸರಿಲ್ಲದ ಬೀದಿಗಳ,
ಎಲ್ಲರೂ ಕ್ವಾರಿಯಲ್ಲಿ ಹೊಲದಲ್ಲಿ ದುಡಿಯುವ
ಒಂದು ಹಳ್ಳಿ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ನೀವು ನಮ್ಮತಾತಂದಿರ ದ್ರಾಕ್ಷಿ ತೋಟ ಕದ್ದಿರಿ.
ನಾನು ದುಡಿಯುತ್ತಿದ್ದೆ
ನನ್ನಮಕ್ಕಳು ದುಡಿಯುತ್ತಿದ್ದರು.
ನನಗೆ ನನ್ನ ಮೊಮ್ಮಕ್ಕಳಿಗೆ
ಈ ಕಲ್ಲು ಬಂಡೆ ಮಾತ್ರ ಬಿಟ್ಟಿದ್ದೀರಿ.
ಸರ್ಕಾರ ಇದನ್ನೂ ತೆಗೆದುಕೊಳ್ಳುತ್ತೆಂದು ಹೇಳುತ್ತಾರೆ.
ಹೌದೆ ?

ಹೀಗೆ!
ರಿಕಾರ್ಡು ಬರೆದುಕೋ, ಮೊದಲ ಪುಟದ ಮೇಲುಗಡೆ :
ನನಗೆ ಜನರನ್ನು ಕಂಡರೆ ದ್ವೇಷವಿಲ್ಲ.
ನಾನು ಯಾರ ಜಮೀನಿನೊಳಗೂ ಕಾಲಿಡುವುದಿಲ್ಲ.
ಆದರೂ, ನನಗೆ ಹಸಿವಾದರೆ
ನನ್ನನ್ನು ಓಡಿಸಿದವರ ಮಾಂಸ ತಿನ್ನುತ್ತೇನೆ.
ಹುಷಾರು, ನನ್ನ ಹಸಿವಿನ ಬಗ್ಗೆಹುಷಾರು!
ನನ್ನ ಕೋಪದ ಬಗ್ಗೆ ಹುಷಾರು!
*****
ಮೂಲ: ಮಹಮೂದ್ ದರ್‍ವೇಶ್

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...