Home / ಕವನ / ಅನುವಾದ / ಚಹರೆಪಟ್ಟಿ

ಚಹರೆಪಟ್ಟಿ

ರಿಕಾರ್ಡು ಬರೆದುಕೋ.
ನಾನು ಅರಬ.
ನನ್ನ ಕಾರ್ಡಿನ ನಂಬರು ಐವತ್ತುಸಾವಿರ.
ಎಂಟು ಮಕ್ಕಳು.
ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ.
ಇದಕ್ಕೆ ಕೋಪ ಯಾಕೆ?
ರಿಕಾರ್ಡು ಬರೆದುಕೋ.

ನಾನು ಅರಬ
ಗೆಳೆಯರೊಡನೆ ಕಲ್ಲಿನ ಕ್ವಾರಿಯಲ್ಲಿ ಕೆಲಸ.
ಎಂಟು ಮಕ್ಕಳು.
ಅವರ ಬ್ರೆಡ್ಡಿಗೆ, ಬಟ್ಟೆಗೆ, ಸ್ಕೂಲು ಪುಸ್ತಕಕ್ಕೆ
ಕಲ್ಲು ಕದಿಯುತ್ತೇನೆ.
ನಿಮ್ಮ ಮನೆ ಬಾಗಿಲಿಗೆ ಭಿಕ್ಷಕ್ಕೆ ಬಂದಿಲ್ಲವಲ್ಲ,
ನಿಮ್ಮಕಾಲಿಗೆ ಬಿದ್ದು ಬೇಡಿಲ್ಲವಲ್ಲ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ಬಿರುದಿಲ್ಲದ ಹೆಸರಿನವನು,
ಕೋಪದ ಸುಳಿಗೆ ಸಿಕ್ಕ ದೇಶದಲ್ಲಿ
ತಾಳ್ಮೆಯಿಂದ ಇರುವವನು.
ನನ್ನ ಬೇರು ಕಾಲದ ಆದಿಗಿಂತ ಹಳೆಯದು.
ಸಮುದ್ರಗಳು ಹುಟ್ಟುವ ಮುನ್ನ
ಸೈಪ್ರಸ್ಸು ಆಲಿವ್ವು ಮರಗಳು ಹುಟ್ಟುವ ಮುನ್ನ
ಜೊಂಡು ಬೆಳೆಯುವ ಮುನ್ನ
ಮುನ್ನ ಎಂಬ ಮುನ್ನ ಬೇರು ಬಿಟ್ಟಿದ್ದೆ.
ನಮ್ಮಪ್ಪ ನೇಗಿಲ ಕುಲದಿಂದ ಬಂದವನು,
ಶ್ರೀಮಂತ ಸರದಾರನಲ್ಲ,
ನಮ್ಮ ತಾತನೂ ರೈತ.
ವಂಶವೃಕ್ಷವಿಲ್ಲದವನು.
ನಮ್ಮ ಮನೆ
ಕೋಲು ಹೂತು ಹುಲ್ಲು ಹೊದಿಸಿದ ಗುಡಿಸಲು.
ನನ್ನ ಸ್ಥಿತಿಯಿಂದ ಸಮಾಧಾನವಾಯಿತೇ?
ನನ್ನ ಹೆಸರಿನ ಜೊತೆಗೆ ಮನೆತನದ ಹೆಸರು ಇಲ್ಲ.
ರಿಕಾರ್ಡು ಬರೆದುಕೋ.

ನಾನು ಅರಬ.
ಕೂದಲ ಬಣ್ಣ : ದಟ್ಟ ಕಪ್ಪು.
ಕಣ್ಣಿನ ಬಣ್ಣ : ಕಂದು.
ನನ್ನ ಗುರುತಿನ ಚಹರೆ : ನೆತ್ತಿಯ ಮೇಲೆ
ಮುಟ್ಟಿದವರ ಕೈ ಸೀಯಿಸಿಬಿಡುವ
ಮಂತ್ರಾಕ್ಷರಗಳಿವೆ ‘ಇಖಾಲ್’ ನೊಡನೆ ‘ಖೆಫಿಯೆ’
ನನ್ನವಿಳಾಸ : ದೂರದ, ಎಲ್ಲರೂ ಮರೆತ, ಹೆಸರಿಲ್ಲದ ಬೀದಿಗಳ,
ಎಲ್ಲರೂ ಕ್ವಾರಿಯಲ್ಲಿ ಹೊಲದಲ್ಲಿ ದುಡಿಯುವ
ಒಂದು ಹಳ್ಳಿ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ನೀವು ನಮ್ಮತಾತಂದಿರ ದ್ರಾಕ್ಷಿ ತೋಟ ಕದ್ದಿರಿ.
ನಾನು ದುಡಿಯುತ್ತಿದ್ದೆ
ನನ್ನಮಕ್ಕಳು ದುಡಿಯುತ್ತಿದ್ದರು.
ನನಗೆ ನನ್ನ ಮೊಮ್ಮಕ್ಕಳಿಗೆ
ಈ ಕಲ್ಲು ಬಂಡೆ ಮಾತ್ರ ಬಿಟ್ಟಿದ್ದೀರಿ.
ಸರ್ಕಾರ ಇದನ್ನೂ ತೆಗೆದುಕೊಳ್ಳುತ್ತೆಂದು ಹೇಳುತ್ತಾರೆ.
ಹೌದೆ ?

ಹೀಗೆ!
ರಿಕಾರ್ಡು ಬರೆದುಕೋ, ಮೊದಲ ಪುಟದ ಮೇಲುಗಡೆ :
ನನಗೆ ಜನರನ್ನು ಕಂಡರೆ ದ್ವೇಷವಿಲ್ಲ.
ನಾನು ಯಾರ ಜಮೀನಿನೊಳಗೂ ಕಾಲಿಡುವುದಿಲ್ಲ.
ಆದರೂ, ನನಗೆ ಹಸಿವಾದರೆ
ನನ್ನನ್ನು ಓಡಿಸಿದವರ ಮಾಂಸ ತಿನ್ನುತ್ತೇನೆ.
ಹುಷಾರು, ನನ್ನ ಹಸಿವಿನ ಬಗ್ಗೆಹುಷಾರು!
ನನ್ನ ಕೋಪದ ಬಗ್ಗೆ ಹುಷಾರು!
*****
ಮೂಲ: ಮಹಮೂದ್ ದರ್‍ವೇಶ್

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...