Home / ಕವನ / ಅನುವಾದ / ಚಹರೆಪಟ್ಟಿ

ಚಹರೆಪಟ್ಟಿ

ರಿಕಾರ್ಡು ಬರೆದುಕೋ.
ನಾನು ಅರಬ.
ನನ್ನ ಕಾರ್ಡಿನ ನಂಬರು ಐವತ್ತುಸಾವಿರ.
ಎಂಟು ಮಕ್ಕಳು.
ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ.
ಇದಕ್ಕೆ ಕೋಪ ಯಾಕೆ?
ರಿಕಾರ್ಡು ಬರೆದುಕೋ.

ನಾನು ಅರಬ
ಗೆಳೆಯರೊಡನೆ ಕಲ್ಲಿನ ಕ್ವಾರಿಯಲ್ಲಿ ಕೆಲಸ.
ಎಂಟು ಮಕ್ಕಳು.
ಅವರ ಬ್ರೆಡ್ಡಿಗೆ, ಬಟ್ಟೆಗೆ, ಸ್ಕೂಲು ಪುಸ್ತಕಕ್ಕೆ
ಕಲ್ಲು ಕದಿಯುತ್ತೇನೆ.
ನಿಮ್ಮ ಮನೆ ಬಾಗಿಲಿಗೆ ಭಿಕ್ಷಕ್ಕೆ ಬಂದಿಲ್ಲವಲ್ಲ,
ನಿಮ್ಮಕಾಲಿಗೆ ಬಿದ್ದು ಬೇಡಿಲ್ಲವಲ್ಲ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ಬಿರುದಿಲ್ಲದ ಹೆಸರಿನವನು,
ಕೋಪದ ಸುಳಿಗೆ ಸಿಕ್ಕ ದೇಶದಲ್ಲಿ
ತಾಳ್ಮೆಯಿಂದ ಇರುವವನು.
ನನ್ನ ಬೇರು ಕಾಲದ ಆದಿಗಿಂತ ಹಳೆಯದು.
ಸಮುದ್ರಗಳು ಹುಟ್ಟುವ ಮುನ್ನ
ಸೈಪ್ರಸ್ಸು ಆಲಿವ್ವು ಮರಗಳು ಹುಟ್ಟುವ ಮುನ್ನ
ಜೊಂಡು ಬೆಳೆಯುವ ಮುನ್ನ
ಮುನ್ನ ಎಂಬ ಮುನ್ನ ಬೇರು ಬಿಟ್ಟಿದ್ದೆ.
ನಮ್ಮಪ್ಪ ನೇಗಿಲ ಕುಲದಿಂದ ಬಂದವನು,
ಶ್ರೀಮಂತ ಸರದಾರನಲ್ಲ,
ನಮ್ಮ ತಾತನೂ ರೈತ.
ವಂಶವೃಕ್ಷವಿಲ್ಲದವನು.
ನಮ್ಮ ಮನೆ
ಕೋಲು ಹೂತು ಹುಲ್ಲು ಹೊದಿಸಿದ ಗುಡಿಸಲು.
ನನ್ನ ಸ್ಥಿತಿಯಿಂದ ಸಮಾಧಾನವಾಯಿತೇ?
ನನ್ನ ಹೆಸರಿನ ಜೊತೆಗೆ ಮನೆತನದ ಹೆಸರು ಇಲ್ಲ.
ರಿಕಾರ್ಡು ಬರೆದುಕೋ.

ನಾನು ಅರಬ.
ಕೂದಲ ಬಣ್ಣ : ದಟ್ಟ ಕಪ್ಪು.
ಕಣ್ಣಿನ ಬಣ್ಣ : ಕಂದು.
ನನ್ನ ಗುರುತಿನ ಚಹರೆ : ನೆತ್ತಿಯ ಮೇಲೆ
ಮುಟ್ಟಿದವರ ಕೈ ಸೀಯಿಸಿಬಿಡುವ
ಮಂತ್ರಾಕ್ಷರಗಳಿವೆ ‘ಇಖಾಲ್’ ನೊಡನೆ ‘ಖೆಫಿಯೆ’
ನನ್ನವಿಳಾಸ : ದೂರದ, ಎಲ್ಲರೂ ಮರೆತ, ಹೆಸರಿಲ್ಲದ ಬೀದಿಗಳ,
ಎಲ್ಲರೂ ಕ್ವಾರಿಯಲ್ಲಿ ಹೊಲದಲ್ಲಿ ದುಡಿಯುವ
ಒಂದು ಹಳ್ಳಿ.
ಇದಕ್ಕೆ ಯಾಕೆ ಕೋಪ?
ರಿಕಾರ್ಡು ಬರೆದುಕೋ.

ನಾನು ಅರಬ.
ನೀವು ನಮ್ಮತಾತಂದಿರ ದ್ರಾಕ್ಷಿ ತೋಟ ಕದ್ದಿರಿ.
ನಾನು ದುಡಿಯುತ್ತಿದ್ದೆ
ನನ್ನಮಕ್ಕಳು ದುಡಿಯುತ್ತಿದ್ದರು.
ನನಗೆ ನನ್ನ ಮೊಮ್ಮಕ್ಕಳಿಗೆ
ಈ ಕಲ್ಲು ಬಂಡೆ ಮಾತ್ರ ಬಿಟ್ಟಿದ್ದೀರಿ.
ಸರ್ಕಾರ ಇದನ್ನೂ ತೆಗೆದುಕೊಳ್ಳುತ್ತೆಂದು ಹೇಳುತ್ತಾರೆ.
ಹೌದೆ ?

ಹೀಗೆ!
ರಿಕಾರ್ಡು ಬರೆದುಕೋ, ಮೊದಲ ಪುಟದ ಮೇಲುಗಡೆ :
ನನಗೆ ಜನರನ್ನು ಕಂಡರೆ ದ್ವೇಷವಿಲ್ಲ.
ನಾನು ಯಾರ ಜಮೀನಿನೊಳಗೂ ಕಾಲಿಡುವುದಿಲ್ಲ.
ಆದರೂ, ನನಗೆ ಹಸಿವಾದರೆ
ನನ್ನನ್ನು ಓಡಿಸಿದವರ ಮಾಂಸ ತಿನ್ನುತ್ತೇನೆ.
ಹುಷಾರು, ನನ್ನ ಹಸಿವಿನ ಬಗ್ಗೆಹುಷಾರು!
ನನ್ನ ಕೋಪದ ಬಗ್ಗೆ ಹುಷಾರು!
*****
ಮೂಲ: ಮಹಮೂದ್ ದರ್‍ವೇಶ್

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...