Home / ಕವನ / ಅನುವಾದ / ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ
ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು
ನಮ್ಮ ಮಕ್ಕಳೊಂದಿಗೆ
ಕಾಡಿಗೆ ಹೋಗಿ ಆಯ್ದಿದ್ದೇವೆ.
ವ್ಯರ್ಥ ಸುರಿದ ರಕ್ತದ ವಾಸನೆಯಂಥ
ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ.
ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈತಿ ಹೊರಿಸಿದ್ದೇವೆ.
ದುರ್ಬೀನು ಹಿಡಿದ ದಿವ್ಯ ಹುಚ್ಚನ ಕಣ್ಣಿಗೆ
ಹಿಗ್ಗಿಮತ್ತೆ ಕುಗ್ಗಿಕಂಡಿದ್ದೇವೆ.
ಬೆಳಕಿನ ಮಕ್ಕಳೊಡನೆ ಕತ್ತಲ ಮಕ್ಕಳು ಯುದ್ಧಮಾಡಿದಾಗ
ನೆಮ್ಮದಿಯ ಲೇಪಿಸುವ ಒಳ್ಳೆಯ ಕತ್ತಲನ್ನು ಪ್ರೀತಿಸಿ
ನೋವು ತರುವ ಬೆಳಕನ್ನು ದ್ವೇಷಿಸಿದ್ದೇವೆ.
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಮಕ್ಕಳನ್ನು ನಮ್ಮ ದೇಶಕ್ಕಿಂತ ಹೆಚ್ಚು
ಪ್ರೀತಿಸಿದ್ದೇವೆ. ನೆಲದಲ್ಲಿ ಬಾವಿ ತೋಡಿದ್ದೇವೆ.
ಈಗ ಆಕಾಶದಲ್ಲಿ
ಕೊನೆ ಇಲ್ಲದ ಮೊದಲಿಲ್ಲದ
ಬಾವಿಗಳೆಷ್ಟೊಂದನ್ನೂ ತೋಡುತಿದ್ದೇವೆ.
ನಮ್ಮ ಕರ್‍ತವ್ಯ ನಾವು ಮಾಡಿದ್ದೇವೆ.

‘ನೀವು ನೆನಪಿಟ್ಟುಕೊಳ್ಳತಕ್ಕದ್ದು’
ಅನ್ನುವ ಮಾತು
‘ನೀವು ಮರೆಯುತ್ತೀರಿ’
ಎಂದು ಬದಲಾಗಿದೆ –
ರೂಟು ಬದಲಾದ ಬಸ್ಸಿನ
ಟೈಂಟೇಬಲ್ಲೂ ಬದಲಾಗುವ ಹಾಗೆ,
ಸಿನೊಗಾಗ್ನಲ್ಲಿ, ಋತು ಬದಲಾದಂತೆ
‘ಇಬ್ಬನಿ ಮತ್ತು ಮಳೆ’
ಎಂಬ ಫಲಕ
‘ಮಳೆಯನ್ನು ತರುವವನು’
ಎಂದು ಬದಲಾಗುವ ಹಾಗೆ
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಬದುಕನ್ನು ಅಚ್ಚುಕಟ್ಟು ಮಾಡಿದ್ದೇವೆ…
ಹೂಹಾಸು, ಮೆತ್ತನೆ ಲಾನು, ಹಿತವಾದ ನೆರಳು.
ಹಸಿರು ತುಂಬಿದ ಕಾಲು ಹಾದಿ ಇವೆಲ್ಲ
ಹುಚ್ಚಾಸ್ಪತ್ರೆಯ ಮುಂದೆ ಇರುವ ಹಾಗೆ.
ಹತಾಶೆ ಜೆನ್ನಾಗಿ ಪಳಗಿ ನಮಗೆ ಶಾಂತಿ ತಂದಿದೆ.
ಆಶೆಗಳು ಮಾತ್ರ ಉಳಿದಿವೆ.
ರಾತ್ರಿಗಳನ್ನು ಛಿದ್ರಮಾಡಿ, ಹಗಲನ್ನು ಚಿಂದಿಮಾಡುವ ಅದಮ್ಯ ಆಶೆಗಳು.
ಸಿನಿಮಾ ಥಿಯೇಟರಿನೊಳಗೆ ಹೋಗುತ್ತಿರುವ ಜನ
ಮುಖ ಕೆಂಪಾಗಿ, ಕಣ್ಣು‌ಊದಿ, ಅಥವಾ ಬೇಸತು, ಅಥವಾ
ತುಟಿಯಲ್ಲಿ ಕಣ್ಣಲ್ಲಿ ನಗೆ ತುಂಬಿ ಹೊರಬರುತ್ತಿರುವ ಜನರನ್ನು
ನೋಡಿದರೂ ಗಮನಿಸದೆ, ಹಿಂದೆ ತಿರುಗದೆ,
ಕತಲು ಬೆಳಕು ಕತ್ತಲುಗಳಿಗೆ ಕಾಲಿಡುವ ಹಾಗೆ,
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.
*****
ಮೂಲ: ಯೆಹೂದಾ ಅಮಿಛಾಯ್

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...