Home / ಕವನ / ಅನುವಾದ / ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ
ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು
ನಮ್ಮ ಮಕ್ಕಳೊಂದಿಗೆ
ಕಾಡಿಗೆ ಹೋಗಿ ಆಯ್ದಿದ್ದೇವೆ.
ವ್ಯರ್ಥ ಸುರಿದ ರಕ್ತದ ವಾಸನೆಯಂಥ
ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ.
ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈತಿ ಹೊರಿಸಿದ್ದೇವೆ.
ದುರ್ಬೀನು ಹಿಡಿದ ದಿವ್ಯ ಹುಚ್ಚನ ಕಣ್ಣಿಗೆ
ಹಿಗ್ಗಿಮತ್ತೆ ಕುಗ್ಗಿಕಂಡಿದ್ದೇವೆ.
ಬೆಳಕಿನ ಮಕ್ಕಳೊಡನೆ ಕತ್ತಲ ಮಕ್ಕಳು ಯುದ್ಧಮಾಡಿದಾಗ
ನೆಮ್ಮದಿಯ ಲೇಪಿಸುವ ಒಳ್ಳೆಯ ಕತ್ತಲನ್ನು ಪ್ರೀತಿಸಿ
ನೋವು ತರುವ ಬೆಳಕನ್ನು ದ್ವೇಷಿಸಿದ್ದೇವೆ.
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಮಕ್ಕಳನ್ನು ನಮ್ಮ ದೇಶಕ್ಕಿಂತ ಹೆಚ್ಚು
ಪ್ರೀತಿಸಿದ್ದೇವೆ. ನೆಲದಲ್ಲಿ ಬಾವಿ ತೋಡಿದ್ದೇವೆ.
ಈಗ ಆಕಾಶದಲ್ಲಿ
ಕೊನೆ ಇಲ್ಲದ ಮೊದಲಿಲ್ಲದ
ಬಾವಿಗಳೆಷ್ಟೊಂದನ್ನೂ ತೋಡುತಿದ್ದೇವೆ.
ನಮ್ಮ ಕರ್‍ತವ್ಯ ನಾವು ಮಾಡಿದ್ದೇವೆ.

‘ನೀವು ನೆನಪಿಟ್ಟುಕೊಳ್ಳತಕ್ಕದ್ದು’
ಅನ್ನುವ ಮಾತು
‘ನೀವು ಮರೆಯುತ್ತೀರಿ’
ಎಂದು ಬದಲಾಗಿದೆ –
ರೂಟು ಬದಲಾದ ಬಸ್ಸಿನ
ಟೈಂಟೇಬಲ್ಲೂ ಬದಲಾಗುವ ಹಾಗೆ,
ಸಿನೊಗಾಗ್ನಲ್ಲಿ, ಋತು ಬದಲಾದಂತೆ
‘ಇಬ್ಬನಿ ಮತ್ತು ಮಳೆ’
ಎಂಬ ಫಲಕ
‘ಮಳೆಯನ್ನು ತರುವವನು’
ಎಂದು ಬದಲಾಗುವ ಹಾಗೆ
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಬದುಕನ್ನು ಅಚ್ಚುಕಟ್ಟು ಮಾಡಿದ್ದೇವೆ…
ಹೂಹಾಸು, ಮೆತ್ತನೆ ಲಾನು, ಹಿತವಾದ ನೆರಳು.
ಹಸಿರು ತುಂಬಿದ ಕಾಲು ಹಾದಿ ಇವೆಲ್ಲ
ಹುಚ್ಚಾಸ್ಪತ್ರೆಯ ಮುಂದೆ ಇರುವ ಹಾಗೆ.
ಹತಾಶೆ ಜೆನ್ನಾಗಿ ಪಳಗಿ ನಮಗೆ ಶಾಂತಿ ತಂದಿದೆ.
ಆಶೆಗಳು ಮಾತ್ರ ಉಳಿದಿವೆ.
ರಾತ್ರಿಗಳನ್ನು ಛಿದ್ರಮಾಡಿ, ಹಗಲನ್ನು ಚಿಂದಿಮಾಡುವ ಅದಮ್ಯ ಆಶೆಗಳು.
ಸಿನಿಮಾ ಥಿಯೇಟರಿನೊಳಗೆ ಹೋಗುತ್ತಿರುವ ಜನ
ಮುಖ ಕೆಂಪಾಗಿ, ಕಣ್ಣು‌ಊದಿ, ಅಥವಾ ಬೇಸತು, ಅಥವಾ
ತುಟಿಯಲ್ಲಿ ಕಣ್ಣಲ್ಲಿ ನಗೆ ತುಂಬಿ ಹೊರಬರುತ್ತಿರುವ ಜನರನ್ನು
ನೋಡಿದರೂ ಗಮನಿಸದೆ, ಹಿಂದೆ ತಿರುಗದೆ,
ಕತಲು ಬೆಳಕು ಕತ್ತಲುಗಳಿಗೆ ಕಾಲಿಡುವ ಹಾಗೆ,
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.
*****
ಮೂಲ: ಯೆಹೂದಾ ಅಮಿಛಾಯ್

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...