ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ
ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು
ನಮ್ಮ ಮಕ್ಕಳೊಂದಿಗೆ
ಕಾಡಿಗೆ ಹೋಗಿ ಆಯ್ದಿದ್ದೇವೆ.
ವ್ಯರ್ಥ ಸುರಿದ ರಕ್ತದ ವಾಸನೆಯಂಥ
ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ.
ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈತಿ ಹೊರಿಸಿದ್ದೇವೆ.
ದುರ್ಬೀನು ಹಿಡಿದ ದಿವ್ಯ ಹುಚ್ಚನ ಕಣ್ಣಿಗೆ
ಹಿಗ್ಗಿಮತ್ತೆ ಕುಗ್ಗಿಕಂಡಿದ್ದೇವೆ.
ಬೆಳಕಿನ ಮಕ್ಕಳೊಡನೆ ಕತ್ತಲ ಮಕ್ಕಳು ಯುದ್ಧಮಾಡಿದಾಗ
ನೆಮ್ಮದಿಯ ಲೇಪಿಸುವ ಒಳ್ಳೆಯ ಕತ್ತಲನ್ನು ಪ್ರೀತಿಸಿ
ನೋವು ತರುವ ಬೆಳಕನ್ನು ದ್ವೇಷಿಸಿದ್ದೇವೆ.
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಮಕ್ಕಳನ್ನು ನಮ್ಮ ದೇಶಕ್ಕಿಂತ ಹೆಚ್ಚು
ಪ್ರೀತಿಸಿದ್ದೇವೆ. ನೆಲದಲ್ಲಿ ಬಾವಿ ತೋಡಿದ್ದೇವೆ.
ಈಗ ಆಕಾಶದಲ್ಲಿ
ಕೊನೆ ಇಲ್ಲದ ಮೊದಲಿಲ್ಲದ
ಬಾವಿಗಳೆಷ್ಟೊಂದನ್ನೂ ತೋಡುತಿದ್ದೇವೆ.
ನಮ್ಮ ಕರ್‍ತವ್ಯ ನಾವು ಮಾಡಿದ್ದೇವೆ.

‘ನೀವು ನೆನಪಿಟ್ಟುಕೊಳ್ಳತಕ್ಕದ್ದು’
ಅನ್ನುವ ಮಾತು
‘ನೀವು ಮರೆಯುತ್ತೀರಿ’
ಎಂದು ಬದಲಾಗಿದೆ –
ರೂಟು ಬದಲಾದ ಬಸ್ಸಿನ
ಟೈಂಟೇಬಲ್ಲೂ ಬದಲಾಗುವ ಹಾಗೆ,
ಸಿನೊಗಾಗ್ನಲ್ಲಿ, ಋತು ಬದಲಾದಂತೆ
‘ಇಬ್ಬನಿ ಮತ್ತು ಮಳೆ’
ಎಂಬ ಫಲಕ
‘ಮಳೆಯನ್ನು ತರುವವನು’
ಎಂದು ಬದಲಾಗುವ ಹಾಗೆ
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.

ನಮ್ಮ ಬದುಕನ್ನು ಅಚ್ಚುಕಟ್ಟು ಮಾಡಿದ್ದೇವೆ…
ಹೂಹಾಸು, ಮೆತ್ತನೆ ಲಾನು, ಹಿತವಾದ ನೆರಳು.
ಹಸಿರು ತುಂಬಿದ ಕಾಲು ಹಾದಿ ಇವೆಲ್ಲ
ಹುಚ್ಚಾಸ್ಪತ್ರೆಯ ಮುಂದೆ ಇರುವ ಹಾಗೆ.
ಹತಾಶೆ ಜೆನ್ನಾಗಿ ಪಳಗಿ ನಮಗೆ ಶಾಂತಿ ತಂದಿದೆ.
ಆಶೆಗಳು ಮಾತ್ರ ಉಳಿದಿವೆ.
ರಾತ್ರಿಗಳನ್ನು ಛಿದ್ರಮಾಡಿ, ಹಗಲನ್ನು ಚಿಂದಿಮಾಡುವ ಅದಮ್ಯ ಆಶೆಗಳು.
ಸಿನಿಮಾ ಥಿಯೇಟರಿನೊಳಗೆ ಹೋಗುತ್ತಿರುವ ಜನ
ಮುಖ ಕೆಂಪಾಗಿ, ಕಣ್ಣು‌ಊದಿ, ಅಥವಾ ಬೇಸತು, ಅಥವಾ
ತುಟಿಯಲ್ಲಿ ಕಣ್ಣಲ್ಲಿ ನಗೆ ತುಂಬಿ ಹೊರಬರುತ್ತಿರುವ ಜನರನ್ನು
ನೋಡಿದರೂ ಗಮನಿಸದೆ, ಹಿಂದೆ ತಿರುಗದೆ,
ಕತಲು ಬೆಳಕು ಕತ್ತಲುಗಳಿಗೆ ಕಾಲಿಡುವ ಹಾಗೆ,
ನಮ್ಮ ಕರ್ತವ್ಯ ನಾವು ಮಾಡಿದ್ದೇವೆ.
*****
ಮೂಲ: ಯೆಹೂದಾ ಅಮಿಛಾಯ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೀಷ್ಮ ನಿರ್‍ಯಾಣ
Next post ಧ್ಯಾನ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…