ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೂಮಿಕೆ
Next post ಶೀಗಿಹುಣ್ಣಿವೆದಿನ ಉಣ್ಣಲಿಕ್ಕೆ ಕರೆಯುವರೆಲ್ಲಾ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…