Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...