Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...