Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...