Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...