ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ,
ನಿಜವಾಗಿ
ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ.
ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ
ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ.
ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ
ನಾನು ಜಾಣನಂತೆ ಕಾಣಬೇಕೆಂದು ಸಿದ್ಧನಾದಾಗ
ನನ್ನೊಳಗಡಗಿರುವ ಒಬ್ಬ ಮೂರ್ಖ
ನನ್ನ ಬಾಯನ್ನು ತುಂಬಿ ನಾಲಗೆಯ ಮೇಲೆ ನರ್ತಿಸುತ್ತಾನೆ.
ಮತ್ತೆ ಕೆಲವೊಮ್ಮೆ ಹಲವು ಗಣ್ಯರ ನಡುವೆ
ನಾನು ತೂಕಡಿಸುತ್ತಿರುವಾಗ
ಒಳಗಿನ ಧೈರ್‍ಯವನ್ನೆಲ್ಲ ಕೂಡಿಸಿಕೊಂಡು
ಧೀರನಂತಿರಬೇಕೆಂದರೆ
ನನಗೆ ಗೊತೇ ಇರದ ಹೇಡಿ ಸಾವಿರ ಹಿಂಜರಿಕೆಗಳೊಂದಿಗೆ.
ನನ್ನ ಇಡೀ ಅಸ್ತಿಪಂಜರದ ಮೇಲೆ
ಸವಾರಿ ಮಾಡುತ್ತಾನೆ,
ನಾಲ್ಕಂತಸ್ತಿನ ಸುಂದರ ಮನೆಗೆ ಬೆಂಕಿ ಬಿದ್ದಾಗ
ಫೈರ್ ಮ್ಯಾನನ್ನು ಕರೆದರೆ
ಡಿಡಿಟಿ ಹೊಡೆಯುವವನು ಓಡಿಬರುತ್ತಾನೆ :
ನಾನೇ ಅವನು. ನಾನು ಮಾಡಬಹುದಾದ್ದು ಏನೂ ಇಲ್ಲ.
ನನ್ನನ್ನು ನಾನು ಹೇಗೆ ಒಗ್ಗೂಡಿಸಿಕೊಳ್ಳಲಿ?
ನಾನು ಓದುವ ಪುಸಕಗಳಲ್ಲಿ ಹೀರೊಗಳು
ಸಿಂಹ ಸದೃಶರು, ಆತ್ಮ ವಿಶ್ವಾಸ ಭರಿತರು.
ಅವರ ಕಥೆ ಓದಿದರೆ ನನಗೋ
ಅಸೂಯೆಯಿಂದ ಸಾಯಬೇಕೆನಿಸುತ್ತದೆ.
ಸಿನಿಮಾಕ್ಕೆ ಹೋದರೆ
ಗಾಳಿಯಲ್ಲಿ ಸುಂಯ್ ಗುಡುವ ಬುಲೆಟ್ಟುಗಳ ನಡುವೆ
ಆರಾಮವಾಗಿ ಓಡಾಡುವ ಕೌಬಾಯ್ಗಳನ್ನು ಕಂಡು ಹೊಟ್ಟೆಕಿಚ್ಚಾಗುತ್ತದೆ.
ಎಲಾ, ಅವರ ಕುದುರೆಗೂ ಎಷ್ಟೊಂದು ಧೈರ್ಯ ಅನ್ನಿಸಿಬಿಡುತ್ತದೆ.
ಒಳಗಿನ ಉತ್ಸಾಹಿಯನ್ನು ಬಾರೆಂದು ಕರೆದರೆ
ನನ್ನೊಳಗಿಂದ ಅದೇ ಮುದಿ ಸೋಮಾರಿ ಆಲಸಿ ಕಾಣಿಸಿಕೊಳ್ಳುತ್ತಾನೆ.
ಅದಕ್ಕೆಂದೇ ನಾನೆಂದರೆ ಯಾರೆಂದು ನನಗೆ ತಿಳಿಯುವುದೇ ಇಲ್ಲ.
ನಾನೆಂದರೆಷ್ಟು ಜನ? ಈಗಿರುವವರು ಯಾರು?
ಗೊತ್ತೇ ಆಗುವುದಿಲ್ಲ,
ರಾಜನಂತೆ ಕರೆಗಂಟೆಯೊತ್ತಿ, ನನ್ನನ್ನು, ನನ್ನೊಳಗಿನ ನಿಜವಾದ ನನ್ನನ್ನು
ಕರೆಯಬೇಕು ನಾನು. ನಿಜವಾದ ನಾನು ಸಿಗಬೇಕಾದರೆ
ನಾನು ಮರೆಯಾಗಿಬಿಡಬಾರದಲ್ಲ.
ಈಗ, ಬರೆಯುತಿರುವಾಗ, ನಾನು ದೂರದಲ್ಲಿದ್ದೇನೆ;
ವಾಪಸ್ಸು ಬರುವಷ್ಟು ಹೊತ್ತಿಗೆ ನಾನು ಹೊರಟುಹೋಗಿರುತ್ತೇನೆ.
ಹೀಗೆ ನನಗೆ ಆಗುವ ಹಾಗೇ ಬೇರೆಯವರಿಗೆ ಕೂಡಾ,
ಆಗುತ್ತದೆಯೇ ಎಂದು ತಿಳಿಯುವ ಆಸೆ ನನಗೆ.
ನನಗೆ ನಾನು ಕಾಣಿಸುವಂತೆ ಅವರಿಗೂ ಅವರು ಕಾಣುತ್ತಾರೆಯೋ?
ಈ ಸಮಸ್ಯೆ ತಳಮುಟ್ಟ ಶೋಧಿಸಿದ ಮೇಲೆ
ಸ್ಕೂಲಿಗೆ ಹೋಗಿ ಪಾಠ ಹೇಳುತ್ತೇನೆ.
ನನ್ನ ಸಮಸ್ಯೆ ವಿವರಿಸಲು ಹೊರಟರೆ
ನನ್ನ ಬಗ್ಗೆ ಅಲ್ಲ, ಭೂಗೋಳದ ಬಗ್ಗೆಮಾತಾಡುತ್ತೇನೆ.
*****
ಮೂಲ: ಪಾಬ್ಲೋ ನೆರುಡಾ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಡೆಕಂಜಿ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys