ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ,
ನಿಜವಾಗಿ
ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ.
ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ
ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ.
ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ
ನಾನು ಜಾಣನಂತೆ ಕಾಣಬೇಕೆಂದು ಸಿದ್ಧನಾದಾಗ
ನನ್ನೊಳಗಡಗಿರುವ ಒಬ್ಬ ಮೂರ್ಖ
ನನ್ನ ಬಾಯನ್ನು ತುಂಬಿ ನಾಲಗೆಯ ಮೇಲೆ ನರ್ತಿಸುತ್ತಾನೆ.
ಮತ್ತೆ ಕೆಲವೊಮ್ಮೆ ಹಲವು ಗಣ್ಯರ ನಡುವೆ
ನಾನು ತೂಕಡಿಸುತ್ತಿರುವಾಗ
ಒಳಗಿನ ಧೈರ್‍ಯವನ್ನೆಲ್ಲ ಕೂಡಿಸಿಕೊಂಡು
ಧೀರನಂತಿರಬೇಕೆಂದರೆ
ನನಗೆ ಗೊತೇ ಇರದ ಹೇಡಿ ಸಾವಿರ ಹಿಂಜರಿಕೆಗಳೊಂದಿಗೆ.
ನನ್ನ ಇಡೀ ಅಸ್ತಿಪಂಜರದ ಮೇಲೆ
ಸವಾರಿ ಮಾಡುತ್ತಾನೆ,
ನಾಲ್ಕಂತಸ್ತಿನ ಸುಂದರ ಮನೆಗೆ ಬೆಂಕಿ ಬಿದ್ದಾಗ
ಫೈರ್ ಮ್ಯಾನನ್ನು ಕರೆದರೆ
ಡಿಡಿಟಿ ಹೊಡೆಯುವವನು ಓಡಿಬರುತ್ತಾನೆ :
ನಾನೇ ಅವನು. ನಾನು ಮಾಡಬಹುದಾದ್ದು ಏನೂ ಇಲ್ಲ.
ನನ್ನನ್ನು ನಾನು ಹೇಗೆ ಒಗ್ಗೂಡಿಸಿಕೊಳ್ಳಲಿ?
ನಾನು ಓದುವ ಪುಸಕಗಳಲ್ಲಿ ಹೀರೊಗಳು
ಸಿಂಹ ಸದೃಶರು, ಆತ್ಮ ವಿಶ್ವಾಸ ಭರಿತರು.
ಅವರ ಕಥೆ ಓದಿದರೆ ನನಗೋ
ಅಸೂಯೆಯಿಂದ ಸಾಯಬೇಕೆನಿಸುತ್ತದೆ.
ಸಿನಿಮಾಕ್ಕೆ ಹೋದರೆ
ಗಾಳಿಯಲ್ಲಿ ಸುಂಯ್ ಗುಡುವ ಬುಲೆಟ್ಟುಗಳ ನಡುವೆ
ಆರಾಮವಾಗಿ ಓಡಾಡುವ ಕೌಬಾಯ್ಗಳನ್ನು ಕಂಡು ಹೊಟ್ಟೆಕಿಚ್ಚಾಗುತ್ತದೆ.
ಎಲಾ, ಅವರ ಕುದುರೆಗೂ ಎಷ್ಟೊಂದು ಧೈರ್ಯ ಅನ್ನಿಸಿಬಿಡುತ್ತದೆ.
ಒಳಗಿನ ಉತ್ಸಾಹಿಯನ್ನು ಬಾರೆಂದು ಕರೆದರೆ
ನನ್ನೊಳಗಿಂದ ಅದೇ ಮುದಿ ಸೋಮಾರಿ ಆಲಸಿ ಕಾಣಿಸಿಕೊಳ್ಳುತ್ತಾನೆ.
ಅದಕ್ಕೆಂದೇ ನಾನೆಂದರೆ ಯಾರೆಂದು ನನಗೆ ತಿಳಿಯುವುದೇ ಇಲ್ಲ.
ನಾನೆಂದರೆಷ್ಟು ಜನ? ಈಗಿರುವವರು ಯಾರು?
ಗೊತ್ತೇ ಆಗುವುದಿಲ್ಲ,
ರಾಜನಂತೆ ಕರೆಗಂಟೆಯೊತ್ತಿ, ನನ್ನನ್ನು, ನನ್ನೊಳಗಿನ ನಿಜವಾದ ನನ್ನನ್ನು
ಕರೆಯಬೇಕು ನಾನು. ನಿಜವಾದ ನಾನು ಸಿಗಬೇಕಾದರೆ
ನಾನು ಮರೆಯಾಗಿಬಿಡಬಾರದಲ್ಲ.
ಈಗ, ಬರೆಯುತಿರುವಾಗ, ನಾನು ದೂರದಲ್ಲಿದ್ದೇನೆ;
ವಾಪಸ್ಸು ಬರುವಷ್ಟು ಹೊತ್ತಿಗೆ ನಾನು ಹೊರಟುಹೋಗಿರುತ್ತೇನೆ.
ಹೀಗೆ ನನಗೆ ಆಗುವ ಹಾಗೇ ಬೇರೆಯವರಿಗೆ ಕೂಡಾ,
ಆಗುತ್ತದೆಯೇ ಎಂದು ತಿಳಿಯುವ ಆಸೆ ನನಗೆ.
ನನಗೆ ನಾನು ಕಾಣಿಸುವಂತೆ ಅವರಿಗೂ ಅವರು ಕಾಣುತ್ತಾರೆಯೋ?
ಈ ಸಮಸ್ಯೆ ತಳಮುಟ್ಟ ಶೋಧಿಸಿದ ಮೇಲೆ
ಸ್ಕೂಲಿಗೆ ಹೋಗಿ ಪಾಠ ಹೇಳುತ್ತೇನೆ.
ನನ್ನ ಸಮಸ್ಯೆ ವಿವರಿಸಲು ಹೊರಟರೆ
ನನ್ನ ಬಗ್ಗೆ ಅಲ್ಲ, ಭೂಗೋಳದ ಬಗ್ಗೆಮಾತಾಡುತ್ತೇನೆ.
*****
ಮೂಲ: ಪಾಬ್ಲೋ ನೆರುಡಾ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಡೆಕಂಜಿ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…