Home / ಕವನ / ಅನುವಾದ / ನಾವು ಬಹಳ ಜನ

ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ,
ನಿಜವಾಗಿ
ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ.
ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ
ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ.
ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ
ನಾನು ಜಾಣನಂತೆ ಕಾಣಬೇಕೆಂದು ಸಿದ್ಧನಾದಾಗ
ನನ್ನೊಳಗಡಗಿರುವ ಒಬ್ಬ ಮೂರ್ಖ
ನನ್ನ ಬಾಯನ್ನು ತುಂಬಿ ನಾಲಗೆಯ ಮೇಲೆ ನರ್ತಿಸುತ್ತಾನೆ.
ಮತ್ತೆ ಕೆಲವೊಮ್ಮೆ ಹಲವು ಗಣ್ಯರ ನಡುವೆ
ನಾನು ತೂಕಡಿಸುತ್ತಿರುವಾಗ
ಒಳಗಿನ ಧೈರ್‍ಯವನ್ನೆಲ್ಲ ಕೂಡಿಸಿಕೊಂಡು
ಧೀರನಂತಿರಬೇಕೆಂದರೆ
ನನಗೆ ಗೊತೇ ಇರದ ಹೇಡಿ ಸಾವಿರ ಹಿಂಜರಿಕೆಗಳೊಂದಿಗೆ.
ನನ್ನ ಇಡೀ ಅಸ್ತಿಪಂಜರದ ಮೇಲೆ
ಸವಾರಿ ಮಾಡುತ್ತಾನೆ,
ನಾಲ್ಕಂತಸ್ತಿನ ಸುಂದರ ಮನೆಗೆ ಬೆಂಕಿ ಬಿದ್ದಾಗ
ಫೈರ್ ಮ್ಯಾನನ್ನು ಕರೆದರೆ
ಡಿಡಿಟಿ ಹೊಡೆಯುವವನು ಓಡಿಬರುತ್ತಾನೆ :
ನಾನೇ ಅವನು. ನಾನು ಮಾಡಬಹುದಾದ್ದು ಏನೂ ಇಲ್ಲ.
ನನ್ನನ್ನು ನಾನು ಹೇಗೆ ಒಗ್ಗೂಡಿಸಿಕೊಳ್ಳಲಿ?
ನಾನು ಓದುವ ಪುಸಕಗಳಲ್ಲಿ ಹೀರೊಗಳು
ಸಿಂಹ ಸದೃಶರು, ಆತ್ಮ ವಿಶ್ವಾಸ ಭರಿತರು.
ಅವರ ಕಥೆ ಓದಿದರೆ ನನಗೋ
ಅಸೂಯೆಯಿಂದ ಸಾಯಬೇಕೆನಿಸುತ್ತದೆ.
ಸಿನಿಮಾಕ್ಕೆ ಹೋದರೆ
ಗಾಳಿಯಲ್ಲಿ ಸುಂಯ್ ಗುಡುವ ಬುಲೆಟ್ಟುಗಳ ನಡುವೆ
ಆರಾಮವಾಗಿ ಓಡಾಡುವ ಕೌಬಾಯ್ಗಳನ್ನು ಕಂಡು ಹೊಟ್ಟೆಕಿಚ್ಚಾಗುತ್ತದೆ.
ಎಲಾ, ಅವರ ಕುದುರೆಗೂ ಎಷ್ಟೊಂದು ಧೈರ್ಯ ಅನ್ನಿಸಿಬಿಡುತ್ತದೆ.
ಒಳಗಿನ ಉತ್ಸಾಹಿಯನ್ನು ಬಾರೆಂದು ಕರೆದರೆ
ನನ್ನೊಳಗಿಂದ ಅದೇ ಮುದಿ ಸೋಮಾರಿ ಆಲಸಿ ಕಾಣಿಸಿಕೊಳ್ಳುತ್ತಾನೆ.
ಅದಕ್ಕೆಂದೇ ನಾನೆಂದರೆ ಯಾರೆಂದು ನನಗೆ ತಿಳಿಯುವುದೇ ಇಲ್ಲ.
ನಾನೆಂದರೆಷ್ಟು ಜನ? ಈಗಿರುವವರು ಯಾರು?
ಗೊತ್ತೇ ಆಗುವುದಿಲ್ಲ,
ರಾಜನಂತೆ ಕರೆಗಂಟೆಯೊತ್ತಿ, ನನ್ನನ್ನು, ನನ್ನೊಳಗಿನ ನಿಜವಾದ ನನ್ನನ್ನು
ಕರೆಯಬೇಕು ನಾನು. ನಿಜವಾದ ನಾನು ಸಿಗಬೇಕಾದರೆ
ನಾನು ಮರೆಯಾಗಿಬಿಡಬಾರದಲ್ಲ.
ಈಗ, ಬರೆಯುತಿರುವಾಗ, ನಾನು ದೂರದಲ್ಲಿದ್ದೇನೆ;
ವಾಪಸ್ಸು ಬರುವಷ್ಟು ಹೊತ್ತಿಗೆ ನಾನು ಹೊರಟುಹೋಗಿರುತ್ತೇನೆ.
ಹೀಗೆ ನನಗೆ ಆಗುವ ಹಾಗೇ ಬೇರೆಯವರಿಗೆ ಕೂಡಾ,
ಆಗುತ್ತದೆಯೇ ಎಂದು ತಿಳಿಯುವ ಆಸೆ ನನಗೆ.
ನನಗೆ ನಾನು ಕಾಣಿಸುವಂತೆ ಅವರಿಗೂ ಅವರು ಕಾಣುತ್ತಾರೆಯೋ?
ಈ ಸಮಸ್ಯೆ ತಳಮುಟ್ಟ ಶೋಧಿಸಿದ ಮೇಲೆ
ಸ್ಕೂಲಿಗೆ ಹೋಗಿ ಪಾಠ ಹೇಳುತ್ತೇನೆ.
ನನ್ನ ಸಮಸ್ಯೆ ವಿವರಿಸಲು ಹೊರಟರೆ
ನನ್ನ ಬಗ್ಗೆ ಅಲ್ಲ, ಭೂಗೋಳದ ಬಗ್ಗೆಮಾತಾಡುತ್ತೇನೆ.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...