Home / ಕವನ / ಅನುವಾದ / ಎಷ್ಟು ಕಾಲ?

ಎಷ್ಟು ಕಾಲ?

ಮಹಾ ಅಂದರೆ ಮನುಷ್ಯ ಎಷ್ಟುಕಾಲ ಬದುಕುತ್ತಾನೆ?
ಸಾವಿರ ದಿನವೋ ಒಂದು ದಿನವೋ?
ಒಂದು ವಾರವೋ ಒಂದಷ್ಟು ಶತಮಾನವೋ?
ಸಾಯುವುದರಲ್ಲೆಷ್ಟು ಕಾಲ ಕಳೆಯುತ್ತಾನೆ?
‘ಅನಂತ ಕಾಲ’ ಅಂದರೆ ಎಷ್ಟುಕಾಲ?
ಈ ಯೋಚನೆಗಳಲ್ಲಿ ಮುಳುಗಿ
ಉತ್ತರ ಹುಡುಕಲು ಹೊರಟೆ.
ಹೋಗಿ ಮಹಾ ಗುರುಗಳನ್ನು ಕಂಡೆ.
ಅವರ ಪೂಜೆ ಆಚಾರಗಳೆಲ್ಲ ಮುಗಿಯಲೆಂದು ಕಾದೆ.
ಎಲ್ಲ ಮುಗಿಸಿ ದೇವರನ್ನೋ ದೆವ್ವವನ್ನೋ
ಕಾಣಲು ಹೊರಟರು ಅವರೆಲ್ಲ.
ನನ್ನ ಪ್ರಶ್ನೆ ಕೇಳಿ ಬೇಸತ್ತರು.
ಅವರಿಗೆ ತಿಳಿದದ್ದು ತೀರ ಸ್ವಲ್ಪ.
ಅವರು ಎಷ್ಟಂದರೂ ಮಠದ ಉಸ್ತುವಾರಿ ಅಧಿಕಾರಿಗಳು ತಾನೆ?
ಡಾಕ್ಟರುಗಳು ಕನ್ಸಲ್ಟೇಶನ್ನಿನ ನಡುವೆ ಬಿಡುವು ಮಾಡಿಕೊಂಡು
ನನ್ನ ಕೂರಿಸಿ ಮಾತಾಡಿದರು.
ಕೈಯಲ್ಲಿ ಕತ್ತರಿ, ಚೂರಿ;
ಮೈ ತುಂಬ ಔರೋಮೈಸಿನ್ ವಾಸನೆ.
ದಿನಕ್ಕಿಂತ ಮರುದಿನ ಹೆಚ್ಚು ಬ್ಯುಸಿ.
ಅವರ ಮಾತಿನಿಂದ ತಿಳಿದದ್ದು ಇಷ್ಟು;
ಮೈಕ್ರೋಬುಗಳ ಸಾವು ಮುಖ್ಯವಲ್ಲ…
ದಿನವೂ ಸಹಸ್ರಾರು ಸಾಯುತ್ತವೆ…
ಬದುಕಿ ಉಳಿದವು ವಿಕೃತಿಯ ಲಕ್ಷಣ ತೋರುತ್ತವಲ್ಲ ಅದೇ ಸಮಸ್ಯೆ.
ಭಯವಾಗಿ ಹೆಣ ಸುಡುವಲ್ಲಿಗೆ ಹೋದೆ.
ನದಿಯ ಪಕ್ಕದಲ್ಲಿ ಸುಡುತ್ತಾರೆ,
ಬಣ್ಣ ಬಳಿದ ಹೆಣಗಳು,
ಪುಟ್ಟ ಶರೀರಗಳು,
ಶಾಪದ ಪ್ರಭಾವಳಿ ಹೊತ್ತ
ಅರಸರ ಹೆಣಗಳು,
ವಾಂತಿ ಭೇಧಿ ಬಂದು ಸತ್ತ
ಸುಂದರಿಯರ ಶವಗಳು.
ಹೆಣಗಳ ಬೀಚು,
ನಡುವೆ ದಹನ ಪಾರಂಗತರು.
ಬಿಡುವು ಸಿಕ್ಕಾಗ ಅವರತ್ತ
ನನ್ನ ಪ್ರಶ್ನೆಗಳನ್ನು ಎಸೆದೆ.
‘ನಿನ್ನೊ ಸುಡುತ್ತೇವೆ ಬಾ’ ಅಂದರು.
ಅವರಿಗೆ ತಿಳಿದದ್ದು ಅದೊಂದೇ.
ನಮ್ಮೂರಿಗೆ ಬಂದರೆ ಸ್ಮಶಾನದವರು
ಹೆಂಡ ಹೀರುತ್ತಾ, ನಡುನಡುವೆ ಹೇಳಿದರು :
‘ಒಬ್ಬ ಒಳ್ಳೆ ಹುಡುಗಿಯನ್ನು ಹಿಡಿದುಕೋ
ಈ ಎಲ್ಲ ತರಲೆ ಮರೆತುಬಿಡು.’
ಇಷ್ಟು ಸಂತೋಷವಾಗಿದ್ದವರನ್ನು ನೋಡೇ ಇರಲಿಲ್ಲ.
ಬಾಟಲಿಯ ಮೇಲೆ ಬಾಟಲಿ
ಖಾಲಿ ಮಾಡುತ್ತಾ ಹಾಡಿದರು,
ಮತ್ತೇರಿದರು, ಮಹಾನ್ ಸಂಭೋಗ ಪರಿಣತರು.
ಮನೆಗೆ ಬಂದೆ. ಪ್ರಪಂಚವೆಲ್ಲ ಸುತ್ತಿ
ಮುದುಕನಾಗಿದ್ದೆ.
ಈಗ ಯಾರನ್ನೂ ಕೇಳುವುದಿಲ್ಲ.
ಆದರೆ ದಿನ ಕಳೆದಂತೆ ತಿಳಿಯುವುದು ಕಡಿಮೆಯಾಗುತ್ತಿದೆ.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...