Home / ಕವನ / ಅನುವಾದ / ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಹೀಗೆ, ‘ರಾತ್ರಿ ಚೂರು ಚೂರಾಗಿದೆ,
ದೂರದಲ್ಲಿ ನಕ್ಪತ್ರ ಮಿನುಗಿದೆ’.
ರಾತ್ರಿಯ ಗಾಳಿ ಆಕಾಶದಲ್ಲಿ ಸುಳಿದು ಹಾಡುತ್ತಿದೆ.
ಇವತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸಿದೆ. ಒಮ್ಮೊಮ್ಮೆ ಅವಳೂ ನನ್ನ ಪ್ರೀತಿಸಿದಳು.
ಇಂಥ ರಾತ್ರಿಗಳಲ್ಲಿ ಅವಳನ್ನು ಅಪ್ಪಿ ಹಿಡಿದೆ.
ಮೋಡವಿರದ ಸ್ವಚ್ಛ ಆಕಾಶ. ಮತೆ ಮತ್ತೆ ಮುತಿಟ್ಟೆ.
ಅವಳು ಪ್ರೀತಿಸಿದಳು. ಒಮ್ಮೊಮ್ಮೆ ನಾನೂ ಅವಳನು ಪ್ರೀತಿಸಿದೆ.
ಅಂಥ ವಿಶಾಲ ನಿಶ್ಚಲ ಕಣ್ಣು, ಪ್ರೀತಿಸದಿರುವುದು ಹೇಗೆ.
ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸುವುದಿಲ್ಲ. ಅವಳನ್ನು ಕಳೆದುಕೊಂಡೆ.
ಅಗಾಧ ರಾತ್ರಿ. ಅವಳಿಲ್ಲದೆ ಇನ್ನೂ ಅಗಾಧವಾಗಿದೆ.
ಹುಲ್ಲ ಮೇಲೆ ಇಬ್ಬನಿ ಬೀಳುವ ಸದ್ದಿನಂತೆ ಆತ್ಮದ ಮೇಲೆ ಕವಿತೆಯ ಹನಿಗಳು.
ನನ್ನ ಪ್ರೀತಿ ಅವಳನ್ನುಳಿಸಿಕೊಳ್ಳದಿದ್ದರೆ ಏನಂತೆ.
ರಾತ್ರಿ ಛಿದ್ರವಾಗಿದೆ. ಅವಳಿಲ್ಲ ನನ್ನೊಡನೆ.
ಅಷ್ಟೆ. ದೂರದಲ್ಲಿ ಯಾರದೋ ಹಾಡು. ದೂರದಲ್ಲಿ.
ಅವಳನ್ನು ಕಳೆದುಕೊಂಡು ಆತ್ಮಕ್ಕೆ ತೃಪಿಯಿಲ್ಲ.
ನೋಟ ಅವಳನ್ನು ಹುಡುಕುತ್ತದೆ, ಬಳಿಸಾರಲೆಂದು.
ಹೃದಯ ನೋಡುತ್ತದೆ ಅವಳನ್ನು, ನನ್ನೊಡನೆ ಅವಳಿಲ್ಲ.
ಅದೇ ಇರುಳು ಅದೇ ಮರದ ಮೇಲೆ ಅದೇ ತಿಂಗಳು ಸುರಿದಿದೆ.
ನಾವು ಮಾತ್ರ ಅದೇ ನಾವು ಅಲ್ಲ, ಅದೇ ನಾವು ಆಗಿ ಉಳಿದಿಲ್ಲ.
ಅವಳ ಮೇಲೆ ಪ್ರೀತಿಯಿಲ್ಲ. ಖಂಡಿತ. ಎಷ್ಟೊಂದು ಪ್ರೀತಿ ಇತ್ತು.
ಅವಳ ಕಿವಿಯ ಮುಟ್ಟಲೆಂದು ನನ್ನ ದನಿ ಗಾಳಿಯಾಗಿ ಸುಳಿದಿತ್ತು.
ಇನ್ನು ಮೇಲೆ ಅವಳು ಮತ್ತೊಬ್ಬರಿಗೆ, ಮೊದಲು ನಾನು ಕೊಟ್ಟ ಮುತ್ತುಗಳಂತೆ,
ಅವಳ ದನಿ, ಅವಳ ಹೊಳೆವ ಮೈ, ಅವಳ ಅನಂತ ನೋಟ ಇನ್ನೊಬ್ಬರಿಗೆ.
ಅವಳ ಮೇಲೆ ಈಗ ಪ್ರೀತಿ ಇಲ್ಲ, ಖಂಡಿತ.
ಪ್ರೀತಿ ಇರಬಹುದೇನೋ.
ಪ್ರೀತಿ ಎಷ್ಟು ಕಿರಿದು, ಮರೆವು ಎಷ್ಟು ಹಿರಿದು.
ಇಂಥ ರಾತ್ರಿಯಲ್ಲಿ ಅವಳನ್ನು ಅಪ್ಪಿದ್ದೆ
ಅವಳಿಲ್ಲದೆ ಈಗ ಆತ್ಮಕ್ಕೆ ತೃಪ್ತಿ ಇಲ್ಲ.
ಅವಳು ನನಗೆ ಕೊಡುವ ಕೊನೆಯ ನೋವು ಇದೇ ಇರಬಹುದು
ಅವಳ ಬಗ್ಗೆನಾನು ಬರೆಯುವುದು ಇದೇ ಕೊನೆಯ ಕವಿತೆ ಇರಬಹುದು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...