Home / ಕವನ / ಅನುವಾದ / ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಹೀಗೆ, ‘ರಾತ್ರಿ ಚೂರು ಚೂರಾಗಿದೆ,
ದೂರದಲ್ಲಿ ನಕ್ಪತ್ರ ಮಿನುಗಿದೆ’.
ರಾತ್ರಿಯ ಗಾಳಿ ಆಕಾಶದಲ್ಲಿ ಸುಳಿದು ಹಾಡುತ್ತಿದೆ.
ಇವತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸಿದೆ. ಒಮ್ಮೊಮ್ಮೆ ಅವಳೂ ನನ್ನ ಪ್ರೀತಿಸಿದಳು.
ಇಂಥ ರಾತ್ರಿಗಳಲ್ಲಿ ಅವಳನ್ನು ಅಪ್ಪಿ ಹಿಡಿದೆ.
ಮೋಡವಿರದ ಸ್ವಚ್ಛ ಆಕಾಶ. ಮತೆ ಮತ್ತೆ ಮುತಿಟ್ಟೆ.
ಅವಳು ಪ್ರೀತಿಸಿದಳು. ಒಮ್ಮೊಮ್ಮೆ ನಾನೂ ಅವಳನು ಪ್ರೀತಿಸಿದೆ.
ಅಂಥ ವಿಶಾಲ ನಿಶ್ಚಲ ಕಣ್ಣು, ಪ್ರೀತಿಸದಿರುವುದು ಹೇಗೆ.
ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸುವುದಿಲ್ಲ. ಅವಳನ್ನು ಕಳೆದುಕೊಂಡೆ.
ಅಗಾಧ ರಾತ್ರಿ. ಅವಳಿಲ್ಲದೆ ಇನ್ನೂ ಅಗಾಧವಾಗಿದೆ.
ಹುಲ್ಲ ಮೇಲೆ ಇಬ್ಬನಿ ಬೀಳುವ ಸದ್ದಿನಂತೆ ಆತ್ಮದ ಮೇಲೆ ಕವಿತೆಯ ಹನಿಗಳು.
ನನ್ನ ಪ್ರೀತಿ ಅವಳನ್ನುಳಿಸಿಕೊಳ್ಳದಿದ್ದರೆ ಏನಂತೆ.
ರಾತ್ರಿ ಛಿದ್ರವಾಗಿದೆ. ಅವಳಿಲ್ಲ ನನ್ನೊಡನೆ.
ಅಷ್ಟೆ. ದೂರದಲ್ಲಿ ಯಾರದೋ ಹಾಡು. ದೂರದಲ್ಲಿ.
ಅವಳನ್ನು ಕಳೆದುಕೊಂಡು ಆತ್ಮಕ್ಕೆ ತೃಪಿಯಿಲ್ಲ.
ನೋಟ ಅವಳನ್ನು ಹುಡುಕುತ್ತದೆ, ಬಳಿಸಾರಲೆಂದು.
ಹೃದಯ ನೋಡುತ್ತದೆ ಅವಳನ್ನು, ನನ್ನೊಡನೆ ಅವಳಿಲ್ಲ.
ಅದೇ ಇರುಳು ಅದೇ ಮರದ ಮೇಲೆ ಅದೇ ತಿಂಗಳು ಸುರಿದಿದೆ.
ನಾವು ಮಾತ್ರ ಅದೇ ನಾವು ಅಲ್ಲ, ಅದೇ ನಾವು ಆಗಿ ಉಳಿದಿಲ್ಲ.
ಅವಳ ಮೇಲೆ ಪ್ರೀತಿಯಿಲ್ಲ. ಖಂಡಿತ. ಎಷ್ಟೊಂದು ಪ್ರೀತಿ ಇತ್ತು.
ಅವಳ ಕಿವಿಯ ಮುಟ್ಟಲೆಂದು ನನ್ನ ದನಿ ಗಾಳಿಯಾಗಿ ಸುಳಿದಿತ್ತು.
ಇನ್ನು ಮೇಲೆ ಅವಳು ಮತ್ತೊಬ್ಬರಿಗೆ, ಮೊದಲು ನಾನು ಕೊಟ್ಟ ಮುತ್ತುಗಳಂತೆ,
ಅವಳ ದನಿ, ಅವಳ ಹೊಳೆವ ಮೈ, ಅವಳ ಅನಂತ ನೋಟ ಇನ್ನೊಬ್ಬರಿಗೆ.
ಅವಳ ಮೇಲೆ ಈಗ ಪ್ರೀತಿ ಇಲ್ಲ, ಖಂಡಿತ.
ಪ್ರೀತಿ ಇರಬಹುದೇನೋ.
ಪ್ರೀತಿ ಎಷ್ಟು ಕಿರಿದು, ಮರೆವು ಎಷ್ಟು ಹಿರಿದು.
ಇಂಥ ರಾತ್ರಿಯಲ್ಲಿ ಅವಳನ್ನು ಅಪ್ಪಿದ್ದೆ
ಅವಳಿಲ್ಲದೆ ಈಗ ಆತ್ಮಕ್ಕೆ ತೃಪ್ತಿ ಇಲ್ಲ.
ಅವಳು ನನಗೆ ಕೊಡುವ ಕೊನೆಯ ನೋವು ಇದೇ ಇರಬಹುದು
ಅವಳ ಬಗ್ಗೆನಾನು ಬರೆಯುವುದು ಇದೇ ಕೊನೆಯ ಕವಿತೆ ಇರಬಹುದು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...