ಷೇಕ್ಸ್‌ಪಿಯರನಿಗೆ

ಅಲ್ಲಿ ಬೆಳಗುವ ರವಿಯೆ ಇಲ್ಲಿ ಬೆಳಗುವ; ಹಗಲು
ಬೇರೆ. ಆ ತಾರೆಗಳೆ ಇಲ್ಲಿ ಹೊಳೆವುವು; ಇರುಳು
ಬೇರೆ. ಅದೆ ಮಳೆ ಗಾಳಿ, ಕೊರೆವ ಚಳಿ, ಎಳೆ ಬಿಸಿಲು
ಹದ ಬೇರೆ. ಒಂದೆ ಅನುಭವ, ಬೇರೆ ಹೊರ ಒಡಲು.
ಚಿತ್ತ ಮೆಲುಕಾಡಿಸಿದ ಸುಖ ದುಃಖ ಧಗೆಯೆಲ್ಲ
ಒಂದೆ ಇಡಿ ಲೋಕಕ್ಕೆ. ಬೇರೆ ನುಡಿ, ಆದರೂ
ಫರದೆ ತೆಳು, ಕಾಣುವುವು ಆಚೆಯ ನೋಟಗಳೆಲ್ಲ
ಹಾಗೆ ನೆಚ್ಚಿದ ಜೀವ ಒಳಗೊಳಗೆ ಕೈಬಿಡಲು
ಏನು ಉಳಿಯಿತು? ಭಾವಗೆಡಲು ಎದೆ, ಮನೆಯೊಳಗೆ
ಹಾವು ಎಲ್ಲೋ ಆಡಗಿದಂತೆ ಬಗೆ ಬಗೆ ಶಂಕೆ
ತೋಡುವುವು ಬಗೆಯ, ಬೆಳೆವುದು ಕಾಡು ಎದೆಯೊಳಗೆ,
ಕೂಗಿ ಬೆಚ್ಚಿಸಿ ಓಡುವುವು ತೋಳ ಹುಲಿ ಚಿರತೆ.

ಗೆದ್ದೆ ಬಿಡು ಹೋರಾಡಿ; ಸುಡಲೆದ್ದ ಕಿಚ್ಚನ್ನು
ಮಣಿಹಾರಮಾಡಿ ಲೋಕಕ್ಕಿತ್ತೆ ಮೆಚ್ಚನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ರಾಂತಿ
Next post ನನ್ನ ಕೂಸು ಗಿಣಿಯ ಕೂಸು

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…