ಷೇಕ್ಸ್‌ಪಿಯರನಿಗೆ

ಅಲ್ಲಿ ಬೆಳಗುವ ರವಿಯೆ ಇಲ್ಲಿ ಬೆಳಗುವ; ಹಗಲು
ಬೇರೆ. ಆ ತಾರೆಗಳೆ ಇಲ್ಲಿ ಹೊಳೆವುವು; ಇರುಳು
ಬೇರೆ. ಅದೆ ಮಳೆ ಗಾಳಿ, ಕೊರೆವ ಚಳಿ, ಎಳೆ ಬಿಸಿಲು
ಹದ ಬೇರೆ. ಒಂದೆ ಅನುಭವ, ಬೇರೆ ಹೊರ ಒಡಲು.
ಚಿತ್ತ ಮೆಲುಕಾಡಿಸಿದ ಸುಖ ದುಃಖ ಧಗೆಯೆಲ್ಲ
ಒಂದೆ ಇಡಿ ಲೋಕಕ್ಕೆ. ಬೇರೆ ನುಡಿ, ಆದರೂ
ಫರದೆ ತೆಳು, ಕಾಣುವುವು ಆಚೆಯ ನೋಟಗಳೆಲ್ಲ
ಹಾಗೆ ನೆಚ್ಚಿದ ಜೀವ ಒಳಗೊಳಗೆ ಕೈಬಿಡಲು
ಏನು ಉಳಿಯಿತು? ಭಾವಗೆಡಲು ಎದೆ, ಮನೆಯೊಳಗೆ
ಹಾವು ಎಲ್ಲೋ ಆಡಗಿದಂತೆ ಬಗೆ ಬಗೆ ಶಂಕೆ
ತೋಡುವುವು ಬಗೆಯ, ಬೆಳೆವುದು ಕಾಡು ಎದೆಯೊಳಗೆ,
ಕೂಗಿ ಬೆಚ್ಚಿಸಿ ಓಡುವುವು ತೋಳ ಹುಲಿ ಚಿರತೆ.

ಗೆದ್ದೆ ಬಿಡು ಹೋರಾಡಿ; ಸುಡಲೆದ್ದ ಕಿಚ್ಚನ್ನು
ಮಣಿಹಾರಮಾಡಿ ಲೋಕಕ್ಕಿತ್ತೆ ಮೆಚ್ಚನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ರಾಂತಿ
Next post ನನ್ನ ಕೂಸು ಗಿಣಿಯ ಕೂಸು

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…