ಹಾಮಾ ನಾಯಕ

ಹೆತ್ತವರು ಗೊತ್ತಿದ್ದೆ ಹೆಸರಿಟ್ಟರೆಂಬ ಥರ
ಅಚ್ಚರಿಗೊಳಿಸುವಂತೆ ಬೆಳೆದ ಹಿರಿವ್ಯಕ್ತಿತ್ವ
ಕನ್ನಡದ ಕೋಟೆ ಕೊತ್ತಳ ಫೌಜು ನೆಲಜಲವ
ಹೋರಾಡಿ ಕಾಯ್ದುಕೊಳ್ಳುವ ಧೀರ ದೃಢಸತ್ವ
ನಾಯಕರು ನಿಜವಾಗಿ ನಾಯಕರೆ ; ಗುರಿ, ನಿಟ್ಟು
ವ್ಯೂಹರಚನೆಯ ಗುಟ್ಟು ಪರಿಪೂರ್ಣ ಎಲ್ಲ ಸಲ;
ತೊಡೆತಟ್ಟಿ ಎದುರಾದ ಜಟ್ಟಿಯ ಕ್ಷಣಾರ್ಧದಲ್ಲಿ
ಚಿತ್ತು ಮಾಡುವ ಚತುರ ; ಒಂದೆ ಗುರಿ, ಒಂದೆ ಶರ.
ಜಾತಿಕೋತಿಗಳ ಹಾವಳಿ ಎಲ್ಲ ದಿಕ್ಕಲ್ಲಿ
ಇಲ್ಲ ನೀವಿರುವಲ್ಲಿ, ನೀವೊ ಬಲು ಗಟ್ಟಿಕುಳ
ಕನ್ನಡದ ಶಿಖರಗಳ ಮೇಲೆ ಬೆಳಕನ್ನುರಿಸಿ
ಎಲ್ಲ ಮೂಲೆಗು ಅದನು ಕಾಣಿಸುವ ನಿಷ್ಠೆ, ಛಲ.

ಕನ್ನಡವ ಹಳಿದರೋ, ಕಿಡಿಯಾಡುವುದು ಕಣ್ಣು, ಮಾತೆಲ್ಲ ಸ್ಫೋಟಿಸುವ ಗುಂಡು,
ಸಹ್ಯಾದ್ರಿ ನೆತ್ತಿಯಲಿ ಒಟ್ಟಾಗಿ ಕವಿದು ಘೀಳಿಡುವಂತೆ ಕರಿಮುಗಿಲ ಹಿಂಡು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಗ್ಗಿ ಕಾಲ ಬಂದೈತೆ
Next post ಹಾಲುಬಾಯಿ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…