ಪ್ರಥಮ ಪಾಠ

ಮನಸ್ಸಿನಾಳಕ್ಕೆ ಗಾಳ ಇಳಿಸಿ ಕಾಯುತ್ತ ಕೂತೆ
ಬಂದೀತು ಎಂದು ಕಥೆ, ಕಡೆಗೊಂದು ಮಿಡಿಗವಿತೆ.
ನಾ ಪಟ್ಟಕಷ್ಟ ಒಂದೊಂದನೇ ಕೆಳಕೆಡವಿ
ಮೆಟ್ಟಲಾಗಿಸಿ ಮೇಲೆ ಹತ್ತಿ ಕತ್ತಲ ಕಾಡು
ಕತ್ತಿಯಲಿ ಸವರಿ ಹೊರಬಂದ ಸಾಹಸ ನೆನೆದು
ರೋಮಾಂಚಗೊಂಡೆ. ಇದರೊಂದು ಆಸರೆ ಹಿಡಿದು
ಬಂದೀತು ಕಥೆ, ಕವಿತೆ ಎಂದು ಕಾದೇ ಕಾದೆ.
ಬರಲಿಲ್ಲ ಬಂತು ಸಣ್ಣಗೆ ಜೊಂಪು ತೂಕಡಿಕೆ !
ನಡುವೆ ಮೆಲ್ಲಗೆ ಎಲ್ಲೊ ಗಾಳವಲುಗಿತು. ಖುಷಿಗೆ
ಕೂಗಿ ಹಿಡಿದೆಳೆದೆ ಚುರುಕಾಗಿ ಗಾಳವ ಹೊರಗೆ.
ಬರಲಿಲ್ಲ ಭಾರ. ಬಲಬಿಟ್ಟು ಎಳೆದರೆ ಗಾಳ
ಬಂತು ಮೇಲಕ್ಕ ತುದಿಗಿತ್ತು ಕಾಗದಚೂರು

ಬಲು ಕುತೂಹಲದಿಂದ ಬಿಚ್ಚಿದೆ. ಕಾಗದದ ಒಳಗೆ ಬರೆದಿತ್ತು
‘ಸಾಹಸದ ಸೊಕ್ಕಿರಲಿ, ಮೊದಲು ಕಲಿ ಉಪಕಾರ ಸ್ಮರಣೆಯ ನಿಯತ್ತು.’
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಕಾರಣಿ
Next post ಉಪ್ಪವ್ವಾ ಉಪ್ಪು

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…