Home / ಕವನ / ಕವಿತೆ / ಬಸವಣ್ಣನವರಿಗೆ

ಬಸವಣ್ಣನವರಿಗೆ

ನೀನೇನೊ ನಿಜವಾಗಿ ಮಂತ್ರಿ.
ಬಿಜ್ಜಗಿಜ್ಜಳರ ಸಭೆಗಲ್ಲ ನಾ ಹೇಳುವುದು,
ಕಂತ್ರಿಜನಗಳ ಬಿಡು,
“ಇಟ್ಟರೆ ಸಗಣಿಯಾಗಿ, ತಟ್ಟಿದರೆ ಕುರುಳಾಗಿ
ಸುಟ್ಟರೆ ನೊಸಲಿಗೆ ವಿಭೂತಿಯಾಗಿ
ತಟ್ಟದೇ ಹಾಕಿದರೆ” ಕೊಳವೆ ಗೊಬ್ಬರವಾಗಿ
ನಾರಿದರು ಬೀಗಿ ಮೆರೆಯುವ ಭಂಡರನು ಸುಡು.
ತಂತ್ರಗಳ ಮರೆಯಿರದೆ ಮಂತ್ರವಾಯಿತು ಮಾತು ನಿನ್ನಲ್ಲಿ;
ಎಸೆದ ಮಾತೆಲ್ಲ ಮಸೆದಲುಗಾಗಿ ಇಂದಿಗೂ
ಆಡುತಿದೆ ದಟ್ಟೈಸಿ ಬೆಳೆದ ಕಗ್ಗಾಡಲ್ಲಿ.

ಲಿಂಗಕಲ್ಲಿನ ಮೇಲೆ ಬದುಕ ಒಗೆಯಲು ಹೊರಟ
ರಜಕ ನಿನಗೆ
ಎಲ್ಲರೂ ಬಳಗ, ನಾಟಕದ ಜಗಲಿಯ ಮೇಲೆ
ಲೋಕಸಂವಾದ, ಕಟ್ಟೀಕಾಂತ ಒಳಗೆ.
ಬಾಳಬಲ್ಲದೆ ಸಂತೆಯಲಿ ಸಲಗ? ಆದರೂ
ಸಿಕ್ಕಿಬಿದ್ದಿದೆ ಕಡೆಗೆ ದೊಂಬಿದಾಸರ ಕೈಗೆ!
ಗಂಟೆ, ಮಂಟಪ, ಭಾರಿ ಬೆಳ್ಳಿ ಸಂಪುಟದಲ್ಲಿ
ಅದಕ್ಕೆ ಊರಿನ ನಡುವೆ ಮೆರವಣಿಗೆ.
(ನಾ ಬಲ್ಲೆ ಒಳಗೊಳಗೆ ನಗು ನಿನಗೆ)
ನಿನ್ನೆ ಪಟದೆದುರಿಗೇ
ತಲೆವಾಗುತಿದೆ ಏತ,
ಕೈಮುಗಿದು ಇಕ್ಕುಳ
ಗಿಳಿಯ ಹಿಂಡೇ ನೆರೆದು ಕಲಿತಿದ್ದ ಒದರುತಿದೆ.
ಅಯ್ಯಾ
ನಾವು ಗಳಿಸಿದ್ದೆಲ್ಲ
ನೀ ಕೊಟ್ಟ ದ್ರಾಕ್ಷಿಗಳ ಹುಳಿಸಿ
ಮದ್ಯವ ಇಳಿಸಿ
ಕುಡಿವ ಕಲೆಯ,
ಓಡೆತ್ತ ಬಲ್ಲುದೊ ಅವಲಕ್ಕಿಯ ಸವಿಯ?
ಕತ್ತೆ ತಿಳಿದೀತೆ ಹೊತ್ತಿರುವ ಗಂಧದ ಬೆಲೆಯ?
ಜನ ಬಾಳಲೆಂದು ದುಡಿದವ ನೀನು ಉತ್ಸವದ ಚಿತ್ರವಾಗಿ
ನಿನ್ನ ನುಡಿ ಅಚ್ಚಾಗಿ ಬೈಂಡಾಗಿ
ಬೀರುವಿಗೆ ಸಿಂಗಾರವಾಗಿ,
ಸಂದ ಗೌರವಕಾಗಿ
ನಗು ನಿನಗೆ,
ಕಣ್ಣೀರು ನನಗೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...