Home / ಕವನ / ಕವಿತೆ / ಬಸವಣ್ಣನವರಿಗೆ

ಬಸವಣ್ಣನವರಿಗೆ

ನೀನೇನೊ ನಿಜವಾಗಿ ಮಂತ್ರಿ.
ಬಿಜ್ಜಗಿಜ್ಜಳರ ಸಭೆಗಲ್ಲ ನಾ ಹೇಳುವುದು,
ಕಂತ್ರಿಜನಗಳ ಬಿಡು,
“ಇಟ್ಟರೆ ಸಗಣಿಯಾಗಿ, ತಟ್ಟಿದರೆ ಕುರುಳಾಗಿ
ಸುಟ್ಟರೆ ನೊಸಲಿಗೆ ವಿಭೂತಿಯಾಗಿ
ತಟ್ಟದೇ ಹಾಕಿದರೆ” ಕೊಳವೆ ಗೊಬ್ಬರವಾಗಿ
ನಾರಿದರು ಬೀಗಿ ಮೆರೆಯುವ ಭಂಡರನು ಸುಡು.
ತಂತ್ರಗಳ ಮರೆಯಿರದೆ ಮಂತ್ರವಾಯಿತು ಮಾತು ನಿನ್ನಲ್ಲಿ;
ಎಸೆದ ಮಾತೆಲ್ಲ ಮಸೆದಲುಗಾಗಿ ಇಂದಿಗೂ
ಆಡುತಿದೆ ದಟ್ಟೈಸಿ ಬೆಳೆದ ಕಗ್ಗಾಡಲ್ಲಿ.

ಲಿಂಗಕಲ್ಲಿನ ಮೇಲೆ ಬದುಕ ಒಗೆಯಲು ಹೊರಟ
ರಜಕ ನಿನಗೆ
ಎಲ್ಲರೂ ಬಳಗ, ನಾಟಕದ ಜಗಲಿಯ ಮೇಲೆ
ಲೋಕಸಂವಾದ, ಕಟ್ಟೀಕಾಂತ ಒಳಗೆ.
ಬಾಳಬಲ್ಲದೆ ಸಂತೆಯಲಿ ಸಲಗ? ಆದರೂ
ಸಿಕ್ಕಿಬಿದ್ದಿದೆ ಕಡೆಗೆ ದೊಂಬಿದಾಸರ ಕೈಗೆ!
ಗಂಟೆ, ಮಂಟಪ, ಭಾರಿ ಬೆಳ್ಳಿ ಸಂಪುಟದಲ್ಲಿ
ಅದಕ್ಕೆ ಊರಿನ ನಡುವೆ ಮೆರವಣಿಗೆ.
(ನಾ ಬಲ್ಲೆ ಒಳಗೊಳಗೆ ನಗು ನಿನಗೆ)
ನಿನ್ನೆ ಪಟದೆದುರಿಗೇ
ತಲೆವಾಗುತಿದೆ ಏತ,
ಕೈಮುಗಿದು ಇಕ್ಕುಳ
ಗಿಳಿಯ ಹಿಂಡೇ ನೆರೆದು ಕಲಿತಿದ್ದ ಒದರುತಿದೆ.
ಅಯ್ಯಾ
ನಾವು ಗಳಿಸಿದ್ದೆಲ್ಲ
ನೀ ಕೊಟ್ಟ ದ್ರಾಕ್ಷಿಗಳ ಹುಳಿಸಿ
ಮದ್ಯವ ಇಳಿಸಿ
ಕುಡಿವ ಕಲೆಯ,
ಓಡೆತ್ತ ಬಲ್ಲುದೊ ಅವಲಕ್ಕಿಯ ಸವಿಯ?
ಕತ್ತೆ ತಿಳಿದೀತೆ ಹೊತ್ತಿರುವ ಗಂಧದ ಬೆಲೆಯ?
ಜನ ಬಾಳಲೆಂದು ದುಡಿದವ ನೀನು ಉತ್ಸವದ ಚಿತ್ರವಾಗಿ
ನಿನ್ನ ನುಡಿ ಅಚ್ಚಾಗಿ ಬೈಂಡಾಗಿ
ಬೀರುವಿಗೆ ಸಿಂಗಾರವಾಗಿ,
ಸಂದ ಗೌರವಕಾಗಿ
ನಗು ನಿನಗೆ,
ಕಣ್ಣೀರು ನನಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...