Home / ಕವನ / ಕವಿತೆ / ನೀನು

ನೀನು

ಎದೆಯ ಹೊಂಡದಲೆಲ್ಲ ಎಚ್ಚರದಿ ಕೈಯಾಡಿ
ಹುಡುಕಿ ಎತ್ತಿದ್ದೇನೆ ನಿನ್ನ,
ನಿನ್ನ ಮಲಗಿಸಿ ಮೈಯ ಅಂಗುಲಂಗುಲವನ್ನು
ದುರ್ಬೀನುಗಣ್ಣಿನಲ್ಲಿ ಬೆದಕಿ
ನೋಡಿದರೆ ಇದೇನು, ಎಲ ನೀನು
ಪ್ರತಿ ಕಣದಲೂ ಖುದ್ದು ನಾನು!

ಜವಳಿಯಂಗಡಿಯಲ್ಲಿ ಗಂಟೆಗಟ್ಟಲೆ ಹುಡುಕಿ
ಬಟ್ಟೆ ಹರಿಸುತ್ತಿರಲು ಪಕ್ಕದಲೆ ನೀನು
ಅದೆ ಬಟ್ಟೆಗಳ ತೊಟ್ಟು ನಿಂತಿರುವೆ ಅದಕೂ
ಒಂದೆರಡು ಕಡೆ ಹರಕು;
ಎಂದೊ ಹೊಲಿಸಿದ್ದೆ ಬಿಡು ಇದನು ಎಂಬಂತೆ
ಮುಖದಲ್ಲಿ ಒಂದು ನಗೆ ಪಲುಕು;
ನನಗೊ, ಬದುಕು ಎಲ್ಲ ಥರದಲು ಹೊಸದು ಬೇಕು.

ಒಳಗೆ ಆಳದಲೆಲ್ಲೊ ತೇಲಿಬಂದರೆ
ಒಂದು ತುಣುಕು,
ಬಹಳ ಸಡಗರದಲ್ಲಿ ಎತ್ತಿ
ಕುಕ್ಕಿ, ಇದು ಗಟ್ಟಿ
ಹೊಸ ಮಾತಿನಲ್ಲಿ ಹೆಕ್ಕಿ ತರುವೆನೆನ್ನುತ್ತೇನೆ;
ಆದರಗೊ ಅಲ್ಲಿ,
ತಲೆಯ ಮೇಲೇ ಕಂಡ ಹಾಗೆ ಹೆಣ್ಣಿಗೆ ಹಲ್ಲಿ,
ಊರ ಹೆಬ್ಬಾಗಿಲಿನ ಮೇಲೆ ನಿಂತು
ಅದನೆ ಸಾರುತಲಿರುವೆ ಗಂಟೆಗೊರಳಲ್ಲಿ.
ಬೆವರುತ್ತೇನೆ ನಾನು ಎತ್ತಿ ಬೀಸುತ್ತೇನೆ ಕತ್ತಿ
ನೀನೋ,
ನಗುವೆ ಥಣ್ಣಗೆ ಎಗ್ಗೆ ಇರದೆ, ಮಿಣ್ಣಗೆ ನನ್ನ ಹೂಳಿ
ನನ್ನ ಮಾತ್ಸರ್ಯವೇ ಪ್ರತಿಬಿಂಬಿಸುತ್ತಿರುವ ನಿನ್ನೆ ಗೆಲುವಲ್ಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...