Home / ಕವನ / ಕವಿತೆ / ವಿಷವದನ

ವಿಷವದನ

ಆಗಿನಿಂದಲು ಇವನು ಹೀಗೆಯೇ ರೋಗಿಯೇ,
ಮಾತಲ್ಲಿ ಮಾತ್ರ ಧನ್ವಂತರೀ ಶೈಲಿಯೇ;
ಇಷ್ಟು ದಿನ ಹುಚ್ಚೆದ್ದು ಊದಿರುವ ರಾಗದಲಿ
ಶೋಕ ವ್ಯಭಿಚಾರಿ, ಸ್ಥಾಯಿಯು ಮಾತ್ರ ಟೀಕೆಯೇ.
ಟೀಕೆ ಪರರಿಗೆ, ಆತ್ಮಾರ್ಚನೆಗೆ ನುಡಿಕೇದಗೆ!
ಇವನ ಬೊಜ್ಜು ಪಟಾಕಿ ಸಿಡಿತಕ್ಕೆ ಜಯಕಾರ
ಚಟಪಟಿಸಿ ಅಲೆಯುತಿದೆ ಚಿನಕುರುಳಿ ಮಂದೆ
ಹಿಂದೆ ಮುಂದೆ.

ಕೂದಲಿಗು ಹೆಚ್ಚು ಕನಸಿನ ಗಣಿತ ತಲೆಯಲ್ಲಿ;
ಮೈಯಲ್ಲಿ ಮರೆಸಿರುವ ಅಂಗಿ ಭಂಗಿಗಳೆಲ್ಲ
ತೀರ ಹೊಸಹೊಸದು, ಇಂಗ್ಲಿಷ್ ಪಿಕ್ಚರಲ್ಲಿ
ಕಾಮುವೋ ಭೀಮುವೋ ಬರೆದ ಪುಸ್ತಕದಲ್ಲಿ
ಮೊನ್ನೆ ನೋಡಿದ್ದು.

ಹಾಗಂತಲೇ ಇವನು ಮೂಲಂಗಿ ತಿಂದೂ
ಫರಂಗಿ ತೇಗಿದ್ದು;
ಬಾಳೆಮರ ಲಿಲಿಹೂವು ಬಿಟ್ಟಿತೆಂದದ್ದು;
ನ್ಯೂಯಾರ್ಕಿನಲ್ಲಿ ಮಳೆ ಬಿತ್ತೆಂದು ಶೇಷಾದ್ರಿ-
ಪುರದಲ್ಲಿ ಕೊಡೆಬಿಚ್ಚಿ ಉಳಿದವರ ನಕ್ಕಿದ್ದು.
ಈಗ-
ಬೇರೊಂದು ಹೊಸರಾಗ ಹಾಡುತ್ತಿದ್ದಾನೆ,
ಗುದ್ದಿ ಸುದ್ದಿಗೆ ಜಿಗಿದು, ಚುಟುಕು ಬೆಳಗುವ ರೋಗ
ನರಳುತ್ತಿದ್ದಾನೆ;
ಶಂಖ ಜಾಗಟೆ ಹಿಡಿದು
ನಾಮ ಬಳಿದು
ನಡಿಗೆಯಲಿ ಆಗೀಗ ಲಾಗ ಎಳೆದು
ಬಸ್ಸು ರಿಕ್ಷಾ ಕಾರು ಇಡಿಕಿರಿದ ರಸ್ತೆಯಲಿ
ನಟ್ಟ ನಡುವೆ ನಿಂತು ಕೂಗುತ್ತಿದ್ದಾನೆ.
ಸುತ್ತಲೂ ಮುಕ್ಕಿರಿವ ಜನಮಂದೆ ಕಂಡು
ಮಂಗ ಕುಣಿಸುವ ಕೊಂಗ ಪೂರ ದಂಗಾಗಿ
ಬೆಪ್ಪು ನೋಡಿದ್ದಾನೆ!

ನಿಂತೆಬಿಟ್ಟಿರ! ಅಯ್ಯೋ, ಕೂರಿ ಇವರೆ
ಗೊತ್ತೆ ಏನಾಯ್ತಂತ ಶನಿವಾರ ಬೆಳಗಾಗ?
ಸರ್ಕಲ್ಲ ಹೋಟಲಲಿ ಗುಂಪಲ್ಲಿ ಕಂಡ.
ಎದ್ದವನೆ ಬಳಿ ಬಂದು
“ಹಲೊ ಭಟ್ಟ ಹೊಲಿಸಯ್ಯ ಹೊಸ ಮೆಟ್ಚ” ಎಂದ!
“ಹೇಗಿದೆ ಪ್ರಾಸಗಳ ಗೇಲಿ ಕಂದ?
‘ಅನುಭವದ ಲಯ ಮುರಿದು ಅನುಭಾವಕೇರುವುದೆ
ಎಲ್ಲ ಸಾಹಿತ್ಯಗಳ ಪರಮೋಚ್ಚ ಗುರಿ.’
ಇದು ಖುದ್ದು ನನ್ನದೆ ಮಾತು ಈಗಷ್ಟೆ ಸ್ಫುರಿಸಿದ್ದು”
ಎಂದವನೆ ತನ್ನ ಎರಡೂ ಕೈಗಳನ್ನ
ಪ್ಯಾಂಟಿನೆಡಬಲದ ಎರಡೂ ಜೇಬಲ್ಲಿಟ್ಟು
ತಾಳ ಬಡಿಯುತ್ತ ಎರಡೂ ಕಾಲಿನಿಂದ
ಪ್ರಾಸಶೈಲಿಯಲೆ ಆತ್ಮಾಭಿನಯ ನೀಡಿದ.
ಹುಬ್ಬ ಕೊಂಕಿಸಿ
ಮುಖಕ್ಕೆ ಕೊಂಚ ನಗು ತರಿಸಿ
‘ಕೆಲಬಲದ ಮನ್ನೆಯರ’ ಗತ್ತಿಂದ ನೋಡಿದ.

ಇದ್ದಕ್ಕಿದ್ದಂತೆ ಎದ್ದಿತೊ ಭಾರಿ ಉದ್ಘೋಷ,
ಪತಿಪಾದ ಸೇವೆಯಲ್ಲಿ ಮೈಯ ಸಲ್ಲಿಸಲೆಂದು
ತವಕದಲ್ಲಿ ಕಾದ ಸತಿಭಾವದಾವೇಶ.
ಉಬ್ಬಿ ಚಿನಕುರುಳಿಗಳು ಬಿರುದ ಸಿಡಿಸಿದರಯ್ಯ ಮೆಚ್ಚುಗಣ್ಣಾಗಿ
ನಡೆದ ವಿಷವದನ ಹೊಗಳಲೂ ಬರದ ದಡ್ದರನ್ನು
ಕಾವ್ಯಶೈಲಿಯಲಿ ಚುಚ್ಚುತ್ತ
ಚಿನಕುರುಳಿಗಳ ತಲೆಯ ಸವರುತ್ತ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...