ಬರಡು

ಬಯಲ ಹೆಡೆಯಾಗಿ ನೆರಳ ಕೊಡೆಯಾಗಿ
ಫಲ ಸುರಿಸಲು ಬಯಸಿ,
ಮೊಳಕೆ ಒಡೆಯುತಿರುವಾಗಲೆ ಯಾವುದೊ
ನಂಜು ಗಾಳಿ ಬೀಸಿ,
ತೊಟ್ಟ ವಸ್ತ್ರವೇ ಜಗುಳಿ ಬಿದ್ದಂತೆ
ಎಲೆಯುದುರಿವೆ ಕೆಳಗೆ;
ಪ್ರಾಯದ ಗಿಡ ಆಯ ತಪ್ಪಿದಂತಿದೆ
ಈ ರೂಪವೆ ಇದಕೆ?
ಮೂಳೆಗೈಯಾಗಿ ಮುಗಿಲಿಗೆ ಚಾಚಿದ
ಬರದ ಭಿಕ್ಷಹಸ್ತ.
ಸತ್ತ ಸಿರಿಯನ್ನು ಎತ್ತಲು ನಿಲುಕದೆ
ಅಳುತಲಿರುವ ತ್ರಸ್ತ;
ಕಾಣುವ ಕಣ್ಣಿನ ಶಾಪ,
ಬಾಳಿನ ಹಾಳಿಗೆ ರೂಪ,
ಬೋಳು ಬಯಲಲ್ಲಿ, ಬೆಂಕಿ ಬಿಸಿಲಲ್ಲಿ
ಸ್ತಬ್ಧವಾದಂತೆ ಮಾರಿಗುಡಿಯಲ್ಲಿ
ಹೊಗೆಯಾಗೇಳುವ ಧೂಪ;
ಗಾಳಿಮೈಯ ಸೀಳುತ ನಿಂತಿರುವ
ಒರೆಗಳಚಿದ ಬಾಳು,
ಗತಿಸಿದ ಬದುಕಿಗೆ ತಪಿಸುತಿರುವ ಈ
ಮರದ ರೋಗಿಬಾಳು.
* * *

ಟೊಂಗೆಯೊಡೆದ ದಿನದಿಂದಲು ಗಿಡಕೆ
ಪಡೆಯಬೇಕು ಎಂಬುದೊಂದೆ ಬಯಕೆ
ತಿಳಿಯದಂತೆ ತಳದಿಂದಲೆ ಬೆಳೆದು
ಮೈಯೆಲ್ಲಾ ಹಸಿರ ವಸ್ತ್ರ ತಳೆದು,
ತುಳುಕಬೇಕು ಮೈ ತುಂಬಾ ಹಣ್ಣು
ತಣಿಯುವಂತೆ ಬೆಳೆಸಿದವನ ಕಣ್ಣು;
ಬಯಲಲೆಲ್ಲ ತನ್ನ ಕುಲವ ನಿಲಿಸಿ
ಬಾಳಬೇಕು ಎಂದು ಬೇರನಿಳಿಸಿ,
ಮಂತ್ರ ಜಲವ ಸಿಡಿಸಿದಂತೆ ಈ ಗಿಡ
ಭರ ಭರ ಬೆಳೆದಾಯಿತು ಪುಟ್ಟ ಮರ.
* * *

ರಸವತಿಯಾದರು ತನ್ನೊಡಲು
ಗುರಿಯೋ ತಳಕಾಣದ ಕಡಲು.
ಫಲ ಬಿಡದಿದ್ದರೆ ಏನಿದ್ದೇನು
ಮುಗಿಯಿತೆ ಬರಿ ಸುಖಪಡಲು?
ಕರಿಮುಗಿಲಿನ ಸಂತತ ರಸಧಾರೆಗು
ಮೊಗ್ಗನು ತಳೆಯದು ಮಡಿಲು :
ಗಂಗೆಗನಸ ಕಟ್ಟಿದ ಹೊಳೆ ಇಂಗಿದೆ
ಸುಡುಹೆಂಚಾಗಿದೆ ಒಡಲು ;
ಇಡಿ ಜಗ ಫಲವತಿಯಾದರು ನಿಯಮಕೆ
ಹೊರತಾಗಿದೆ ಈ ಗಿಡ,
ಎಷ್ಟೆ ನುಡಿಸಿದರು ಸುಸ್ವರ ಬರದಿದೆ
ಒಡೆದ ಮಡಕೆ ಈ ಘಟ.
ಗುಡಿಯನು ಬೆಳಗಲು ಬಯಸಿದ ಸೊಡರು
ಉರಿಯುತ್ತಿದೆ ಚಿತೆ ಸುಡಲು;
ಚಾಮರವಾಗುವ ಕನಸ ಕಂಡ ಗಿಡ
ಆಯಿತೆ ಕಸಗುಡಿಸುವ ಬರಲು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನವಂಬರ
Next post ದೀಪ ಆರಿದೆ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…