Home / ಕವನ / ಕವಿತೆ / ಬರಡು

ಬರಡು

ಬಯಲ ಹೆಡೆಯಾಗಿ ನೆರಳ ಕೊಡೆಯಾಗಿ
ಫಲ ಸುರಿಸಲು ಬಯಸಿ,
ಮೊಳಕೆ ಒಡೆಯುತಿರುವಾಗಲೆ ಯಾವುದೊ
ನಂಜು ಗಾಳಿ ಬೀಸಿ,
ತೊಟ್ಟ ವಸ್ತ್ರವೇ ಜಗುಳಿ ಬಿದ್ದಂತೆ
ಎಲೆಯುದುರಿವೆ ಕೆಳಗೆ;
ಪ್ರಾಯದ ಗಿಡ ಆಯ ತಪ್ಪಿದಂತಿದೆ
ಈ ರೂಪವೆ ಇದಕೆ?
ಮೂಳೆಗೈಯಾಗಿ ಮುಗಿಲಿಗೆ ಚಾಚಿದ
ಬರದ ಭಿಕ್ಷಹಸ್ತ.
ಸತ್ತ ಸಿರಿಯನ್ನು ಎತ್ತಲು ನಿಲುಕದೆ
ಅಳುತಲಿರುವ ತ್ರಸ್ತ;
ಕಾಣುವ ಕಣ್ಣಿನ ಶಾಪ,
ಬಾಳಿನ ಹಾಳಿಗೆ ರೂಪ,
ಬೋಳು ಬಯಲಲ್ಲಿ, ಬೆಂಕಿ ಬಿಸಿಲಲ್ಲಿ
ಸ್ತಬ್ಧವಾದಂತೆ ಮಾರಿಗುಡಿಯಲ್ಲಿ
ಹೊಗೆಯಾಗೇಳುವ ಧೂಪ;
ಗಾಳಿಮೈಯ ಸೀಳುತ ನಿಂತಿರುವ
ಒರೆಗಳಚಿದ ಬಾಳು,
ಗತಿಸಿದ ಬದುಕಿಗೆ ತಪಿಸುತಿರುವ ಈ
ಮರದ ರೋಗಿಬಾಳು.
* * *

ಟೊಂಗೆಯೊಡೆದ ದಿನದಿಂದಲು ಗಿಡಕೆ
ಪಡೆಯಬೇಕು ಎಂಬುದೊಂದೆ ಬಯಕೆ
ತಿಳಿಯದಂತೆ ತಳದಿಂದಲೆ ಬೆಳೆದು
ಮೈಯೆಲ್ಲಾ ಹಸಿರ ವಸ್ತ್ರ ತಳೆದು,
ತುಳುಕಬೇಕು ಮೈ ತುಂಬಾ ಹಣ್ಣು
ತಣಿಯುವಂತೆ ಬೆಳೆಸಿದವನ ಕಣ್ಣು;
ಬಯಲಲೆಲ್ಲ ತನ್ನ ಕುಲವ ನಿಲಿಸಿ
ಬಾಳಬೇಕು ಎಂದು ಬೇರನಿಳಿಸಿ,
ಮಂತ್ರ ಜಲವ ಸಿಡಿಸಿದಂತೆ ಈ ಗಿಡ
ಭರ ಭರ ಬೆಳೆದಾಯಿತು ಪುಟ್ಟ ಮರ.
* * *

ರಸವತಿಯಾದರು ತನ್ನೊಡಲು
ಗುರಿಯೋ ತಳಕಾಣದ ಕಡಲು.
ಫಲ ಬಿಡದಿದ್ದರೆ ಏನಿದ್ದೇನು
ಮುಗಿಯಿತೆ ಬರಿ ಸುಖಪಡಲು?
ಕರಿಮುಗಿಲಿನ ಸಂತತ ರಸಧಾರೆಗು
ಮೊಗ್ಗನು ತಳೆಯದು ಮಡಿಲು :
ಗಂಗೆಗನಸ ಕಟ್ಟಿದ ಹೊಳೆ ಇಂಗಿದೆ
ಸುಡುಹೆಂಚಾಗಿದೆ ಒಡಲು ;
ಇಡಿ ಜಗ ಫಲವತಿಯಾದರು ನಿಯಮಕೆ
ಹೊರತಾಗಿದೆ ಈ ಗಿಡ,
ಎಷ್ಟೆ ನುಡಿಸಿದರು ಸುಸ್ವರ ಬರದಿದೆ
ಒಡೆದ ಮಡಕೆ ಈ ಘಟ.
ಗುಡಿಯನು ಬೆಳಗಲು ಬಯಸಿದ ಸೊಡರು
ಉರಿಯುತ್ತಿದೆ ಚಿತೆ ಸುಡಲು;
ಚಾಮರವಾಗುವ ಕನಸ ಕಂಡ ಗಿಡ
ಆಯಿತೆ ಕಸಗುಡಿಸುವ ಬರಲು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...