Home / ಕವನ / ಕವಿತೆ / ಸಾವು

ಸಾವು

ಕಂಡಿರುವೆ ಮೂರು ಸಲ ಇವನ ಮೋರೆ,
ಮನೆಯಂಗಳಕೆ ನುಗ್ಗಿ ಹೀಚು ಹರಿವಾಗ,
ನೋಡುವರ ಕೈಕಟ್ಟಿ ಹಗಲೆ ಲೂಟಿಯ ಹೊಡೆವ ದರೋಡೆಕೋರ
ಹಂಡೆಯಂಥಾ ಹೊಟ್ಟೆ, ಕಿರುಬೆಂಡುಗಾಲು,
ಉಂಡದ್ದು ಉದರ ಸೇರದ ಯಾವ ರೋಗವೋ!
ತಿನಿಮೋರೆ ಚಂದವೋ, ಅರಕೆ ಅತೃಪ್ತಿಗಳೆ
ತೇದ ಇದ್ದಿಲಿನಲ್ಲಿ ಗೆರೆನಿಂತೆ ಬರಲುಮುಖ;
ರೆಪ್ಪೆ ತಡೆಯೂ ಇರದ ಬತ್ತುಗಣ್ಣೊಡಲಲ್ಲಿ
ನೆತ್ತರನೆ ಹೆಪ್ಪುಗಟ್ಟಿಸುವ ಥಣ್ಣನೆ ಬೆಳಕುಗೋಲಿ,
ಜೋಲ್ವ ಗೊಣೆಸಿಂಬಳದ ಬಣ್ಣದಾಲಿ;
ಕಪ್ಪು ಹಾವಂಥ ಉದ್ದನೆ ನಂಜುಗೈ ಚಾಚಿ,
ಉತ್ತಬಿತ್ತಗಳನ್ನೆ ಹೆಕ್ಕಿ,
ಹುಬ್ಬೆತ್ತಿ ನಗುವ ಲೊಟಕರಿಸಿ ನೆಕ್ಕಿ.

ಈಚೀಚೆ ಎಲ್ಲೆಲ್ಲು ಇವನ ನೆರಳು-
ಮೂಳೆಗಣ್ಣಿನ ಸುತ್ತ ಕರಿಯುಂಗುರವ ಬೆಳೆದ
ಮೂವತ್ತು ದಾಟಿರುವ ಬ್ರಹ್ಮಚಾರಿ;
ಆಳತೋಳಿಗೆ ದಬ್ಬಿ ಮಗುವನು, ಸಮಾಜದಲಿ
ಭಾಷಣದ ಸೇವೆ ನಡೆಸಿಹ ಶ್ರೀಮತಿ;
ಅಕ್ಕಿಯಂಗಡಿ ಮುಂದೆ ಮೈಲುದ್ದ ಕ್ಯೂನಿಂತು,
ಬೆವರಿಡುವ ಮುಖವ ಚೀಲದಲೆ ಒರೆಸುತ್ತಿರುವ
ಕಂಗಾಲುಗಣ್ಣಿನ ಸ್ವತಂತ್ರ ಗಣರಾಜ್ಯ;
ತಿವಿದಾಗ ಎಚ್ಚತ್ತು ಗಡಬಡಿಸಿ ಕೈಯೆತ್ತಿ
ನಿರ್ಣಯವ ಪಾಸುಮಾಡುವ ಪಕ್ಷ ಬಹುಮತ;
– ಇಲ್ಲೆಲ್ಲ ಆಡಿದಂತಿದೆ ಇವನ ಬೆರಳು.

ಇವನ ಮೈ ಒಮ್ಮೊಮ್ಮೆ ಬೆಳೆದು ಹರಡುವುದು
ಮಣ್ಣು ಮುಗಿಲಿನ ನಡುವೆ ನಂಜುತೆರೆಯಾಗಿ
ನಡುನಡುವೆ ಹರುಕಾಗಿ ಮೋಡಿ ಕೂಗುವುದು.
ಕಾರು ಮೋಟರು ರೈಲು ಕೈಗಾಡಿ ಪ್ಲೇನು,
ನರ ನಾಯಿ ಗಿಡ ಬಳ್ಳಿ ಕಾಗೆ ಗಿಳಿ ಮೀನು,
ಮಗು ಮುದುಕ ಮೊಳಕೆ ಮರ ಮಿಡಿ ಹೀಚು ಹಣ್ಣು-
ಎಲ್ಲಕ್ಕು ಸ್ಫರ್ಧೆ ಆಗ
ಹರುಕಿನಲಿ ತೂರುವಾಗ.
ತೆರೆ ತೂರಿದರೆ ಉಳಿವು
ತಡೆದು ಕೆಡೆದರೆ ಮುಗಿವು.
ತೆರೆ ಬಡಿದು ಸಿಡಿದ ಹರಣದ ಹರಹು ಕಂಡಾಗ
ಬೆರಗಾಗಿ ಬುದ್ಧಿಗನಿಸುವುದು,
ಸಾವೆ ಪ್ರಕೃತಿ, ಬಾಳೆ ವಿಕೃತಿ.
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...