Home / ಕವನ / ಕವಿತೆ / ಪರಮಹಂಸ

ಪರಮಹಂಸ

ಏನಿದೀ ಜಿಗಿದಾಟ
ಕಿವಿಹರಿವ ಕೂಗಾಟ
ಇದುವರೆಗು ಕೇಳರಿಯದೀ ಆರ್ಭಟ?
ಕಳೆದ ಸಂತಮಹಾಂತರಾರು ಕಾಣದ ನೆಲೆಯ ಕಂಡನೆಂಬಂತೆ
ಇವನಾಡುವಾಟ!
ಅವರಿವರ ನಾಲಗೆಯ ಕಿತ್ತು
ತಲೆಯೊಳು ನೆಟ್ಟು
ಬೆಳೆಸಿಹನು ಇವನೊಂದು ಭಾರಿ ಮಂಡೆ.
ರಮಣ ಅರವಿಂದ ನುಡಿಯುವರು ಬುರುಡೆಯೊಳಿಂದ
ಅವರು ಹೊರಜಿಗಿಯೆ ಇದು ಖಾಲಿಹಂಡೆ!

ಯಾರದೋ ಗದ್ದೆಯಲಿ ನಿನ್ನ ದನ ಮೇಯಿಸುವುದಿನ್ನು ಸಾಕು;
ಕಂಡಕಂಡವರೆಲ್ಲ ತುಡುಗುದನ ಎಂದೊಯ್ದು
ದೊಡ್ಡಿಗಟ್ಟುವ ರಂಪ ಏಕೆ ಬೇಕು?
ಇರುವೆರಡು ಪುಡಿಕಾಸ
ನಾಲ್ಕು ಅಡಿ ನೆಲಕೊಳಲು ಹಾಕು,
ಆದ ಕೈಬಿಟ್ಟು
ನೆರೆಬೇಲಿ ತರಿದು
ನಾ ಸುರಭಿಕುಲಸ್ವಾಮಿಯೆನುವುದು ಬರಿ ಧಿಮಾಕು.

ಈಗೀಗ ನಡುಹರೆಯ,
ಮರ್ಮಸ್ಥಾನವ ಮೆಟ್ಟಿ ನಡೆದು ಬರುತಿದ್ದಾನೆ ನರ್ಮಸಚಿವ;
ಉತ್ಥಾನಪಾದರೆದೆ ಮೇಲೆಯೇ
ನಗುನಗುತ
ತುತ್ತುಗೊಳೆ ನಿಲುವಂಥ ಅಗ್ನಿಪಾದ.
ಸಪ್ತಸಾಗರದಡಿಯ ಪಾತಾಳದೊಡಲಲ್ಲಿ
ಅಬ್ಬರಿಸಿ ಒರಲುತಿರೆ ತೋಳ ಕರಡಿ, ಹೊರಗೆ
ಹಣೆಯ ಮಣೆಯಲಿ ಪರಮಹಂಸ ಪಾದದ ರಜವ
ಮೆರೆಸುವನು ‘ವೈರಾಗ್ಯ ಷಟ್ಕ’ ಹಾಡಿ.

ಅರಿವು ವರಿಸುವ ಮುಂಚೆ
ಗುರುಮಹಾರಾಜ ಪೀಠದ ಬಯಕೆ ಎದೆಯೊಳುರಿಯೆ,
ಕುಣಿದಾಡಿ ಬೊಬ್ಬಿಡಲು ಬಯಕೆ ಮುತ್ತಿದ ಜೀವ
ಮೌನದಲಿ ನಿಂತರಿವೆಗೆಣೆಯೆ?
ನಿನ್ನ ಪ್ರಾಣಕೆ ಪರಿಧಿಯೊಡ್ಡಿ ಸುತ್ತುತಲಿರಲು
ಈ ಮಣ್ಣ ನೂರು ಬಣ್ಣ,
ಅದ ಜಿಗಿದ ಮೇಲೆನ್ನು
‘ನನ್ನ ಸಾಧನೆಯ ಗುರಿ ಬ್ರಹ್ಮ, ಅದೆ ಅತ್ಮಕನ್ನ.’

ಸುಗ್ಗಿ ಬರೆ ಬೀಗಿ ಮಾಗಿಗೆ ಕೊರಗಿ ಬಳಲುವನು
ಈ ಪರಮಹಂಸ!
ಪಾಮರರು ಬನ್ನಿರೋ, ಅಡಿಯೊಳಿಡಿ ಹಣೆಯ
ಇವ ಅರವಿಂದರಂಶ!
ಎಲ್ಲೊ ಹುಟ್ಟಿದ ಗಿಡವನಿದರ ನಿಜಭೂಮಿಯೊಳು
ನೆಡಬಾರದೇನೊ ಭಗವಂತ?
ಬಿಸಿಲ ಹಣ್ಣಾಗದೆ ರಸತುಂಬಿ ಕಳಿವಂತೆ ಕೃಪೆಮಾಡೊ,
ಬದುಕಲೀ ಭ್ರಾಂತ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...