ಪರಮಹಂಸ

ಏನಿದೀ ಜಿಗಿದಾಟ
ಕಿವಿಹರಿವ ಕೂಗಾಟ
ಇದುವರೆಗು ಕೇಳರಿಯದೀ ಆರ್ಭಟ?
ಕಳೆದ ಸಂತಮಹಾಂತರಾರು ಕಾಣದ ನೆಲೆಯ ಕಂಡನೆಂಬಂತೆ
ಇವನಾಡುವಾಟ!
ಅವರಿವರ ನಾಲಗೆಯ ಕಿತ್ತು
ತಲೆಯೊಳು ನೆಟ್ಟು
ಬೆಳೆಸಿಹನು ಇವನೊಂದು ಭಾರಿ ಮಂಡೆ.
ರಮಣ ಅರವಿಂದ ನುಡಿಯುವರು ಬುರುಡೆಯೊಳಿಂದ
ಅವರು ಹೊರಜಿಗಿಯೆ ಇದು ಖಾಲಿಹಂಡೆ!

ಯಾರದೋ ಗದ್ದೆಯಲಿ ನಿನ್ನ ದನ ಮೇಯಿಸುವುದಿನ್ನು ಸಾಕು;
ಕಂಡಕಂಡವರೆಲ್ಲ ತುಡುಗುದನ ಎಂದೊಯ್ದು
ದೊಡ್ಡಿಗಟ್ಟುವ ರಂಪ ಏಕೆ ಬೇಕು?
ಇರುವೆರಡು ಪುಡಿಕಾಸ
ನಾಲ್ಕು ಅಡಿ ನೆಲಕೊಳಲು ಹಾಕು,
ಆದ ಕೈಬಿಟ್ಟು
ನೆರೆಬೇಲಿ ತರಿದು
ನಾ ಸುರಭಿಕುಲಸ್ವಾಮಿಯೆನುವುದು ಬರಿ ಧಿಮಾಕು.

ಈಗೀಗ ನಡುಹರೆಯ,
ಮರ್ಮಸ್ಥಾನವ ಮೆಟ್ಟಿ ನಡೆದು ಬರುತಿದ್ದಾನೆ ನರ್ಮಸಚಿವ;
ಉತ್ಥಾನಪಾದರೆದೆ ಮೇಲೆಯೇ
ನಗುನಗುತ
ತುತ್ತುಗೊಳೆ ನಿಲುವಂಥ ಅಗ್ನಿಪಾದ.
ಸಪ್ತಸಾಗರದಡಿಯ ಪಾತಾಳದೊಡಲಲ್ಲಿ
ಅಬ್ಬರಿಸಿ ಒರಲುತಿರೆ ತೋಳ ಕರಡಿ, ಹೊರಗೆ
ಹಣೆಯ ಮಣೆಯಲಿ ಪರಮಹಂಸ ಪಾದದ ರಜವ
ಮೆರೆಸುವನು ‘ವೈರಾಗ್ಯ ಷಟ್ಕ’ ಹಾಡಿ.

ಅರಿವು ವರಿಸುವ ಮುಂಚೆ
ಗುರುಮಹಾರಾಜ ಪೀಠದ ಬಯಕೆ ಎದೆಯೊಳುರಿಯೆ,
ಕುಣಿದಾಡಿ ಬೊಬ್ಬಿಡಲು ಬಯಕೆ ಮುತ್ತಿದ ಜೀವ
ಮೌನದಲಿ ನಿಂತರಿವೆಗೆಣೆಯೆ?
ನಿನ್ನ ಪ್ರಾಣಕೆ ಪರಿಧಿಯೊಡ್ಡಿ ಸುತ್ತುತಲಿರಲು
ಈ ಮಣ್ಣ ನೂರು ಬಣ್ಣ,
ಅದ ಜಿಗಿದ ಮೇಲೆನ್ನು
‘ನನ್ನ ಸಾಧನೆಯ ಗುರಿ ಬ್ರಹ್ಮ, ಅದೆ ಅತ್ಮಕನ್ನ.’

ಸುಗ್ಗಿ ಬರೆ ಬೀಗಿ ಮಾಗಿಗೆ ಕೊರಗಿ ಬಳಲುವನು
ಈ ಪರಮಹಂಸ!
ಪಾಮರರು ಬನ್ನಿರೋ, ಅಡಿಯೊಳಿಡಿ ಹಣೆಯ
ಇವ ಅರವಿಂದರಂಶ!
ಎಲ್ಲೊ ಹುಟ್ಟಿದ ಗಿಡವನಿದರ ನಿಜಭೂಮಿಯೊಳು
ನೆಡಬಾರದೇನೊ ಭಗವಂತ?
ಬಿಸಿಲ ಹಣ್ಣಾಗದೆ ರಸತುಂಬಿ ಕಳಿವಂತೆ ಕೃಪೆಮಾಡೊ,
ಬದುಕಲೀ ಭ್ರಾಂತ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಟುಂಬ ಯೋಜನೆ
Next post ನಾವು ಕಮಲದ ಹೂಗಳು

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys