Home / ಕವನ / ಕವಿತೆ / ತೀ ನಂ ಶ್ರೀ

ತೀ ನಂ ಶ್ರೀ

ಕತ್ತೆತ್ತಿ ನೋಡಿದಲ್ಲದೆ ಕಾಣರೆಂಬಷ್ಟು
ಎತ್ತರಕೆ ಬೆಳೆದಂಥ ಸತ್ಯಕಾಮರು ನೀವು.
ನೀವೆತ್ತಿದರೆ ನಿಮ್ಮ ಬುದ್ಧಿಭುಜದಲಿ ನಿಂತು
ಹೆದ್ದಲೆಯ ನೆಮ್ಮಿ ಏನೆಲ್ಲ ನೋಡಿದೆವು!
ಹಳೆಮಾತಿನೊಡಲಲ್ಲಿ ಕುದಿವ ಜೀವನರಸದ
ಕಡಲ ಚಿತ್ರವನು ಕಣ್ಣಾಗಿ ಈಜಿದೆವು.

ಪ್ರಕ್ಷೇಪ ಲೋಪ ಲಿಪಿಕಾರನಕ್ಷರಪಾಪ
ಕೋಪಗತ್ತರಿ ಬಾಯ್ಗೆ ಕೈಕಾಲುಗಳ ತೆತ್ತು,
ಮುಖಸತ್ತು ನರಳುವೆಷ್ಟೋ ಮಾತ ಎಡೆ ಹಿಡಿದು
ಹೆಕ್ಕಿ ಕರುಣೆಯಲಿ ಮುಖ ಮೈ ಸವರಿ ನೇಹದಲಿ,
ಗತಜೀವನದ ಶೋಕಕಥೆಗೆ ಕಿವಿಗೊಟ್ಟಿರಿ,
ಮೈತಿದ್ದಿ ಮತ್ತೆ ಮುನ್ನಿನ ಬಾಳನಿತ್ತಿರಿ.

ಮಾಸಿದ ಮಹಾಚಿತ್ರಗಳ ಗೆರೆಗಳನು ತಿದ್ದಿ
ಮತ್ತೆ ಮೆರುಗಿತ್ತ ನುಡಿಚಿತ್ರಕಾರರು ನೀವು;
ಬಿತ್ತದಲಿ ಮರ ಕಂಡ ಬುದ್ಧಿಭೀಮರು. ನಮ್ಮ
ನುಡಿಗಂಟನೆಷ್ಟೊ ಬಿಚ್ಚಿದಿರಿ, ಮೆಚ್ಚುವ ರೀತಿ
ಹೊಚ್ಚಿದಿರಿ ಶಾಸ್ತ್ರವಸ್ತ್ರವನು ಕಾವ್ಯದ ಮೈಗೆ.

ಮುಖದೆಲ್ಲ ಚೆಲುವು ಮಡಿ ಗೆಲುವು ಎತ್ತರ ನಿಲುವೆ
ಗೆರೆಗೊಂಡಿತೆಂಬಂತೆ ಸ್ವಲ್ಪ ಬರೆದಿರಿ. ಏಕೆ,
ಹತ್ತು ತಲೆ ಬೇಕೆ ಚೆಲುವನು ಮೆರೆಸೆ? ರಾಮರುಚಿ;
ಎಲ್ಲ ಬಳಸಲೆಬೇಕು ನಿತ್ಯಪಾರಾಯಣಕೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...