ಊರ್ಮಿಳೆ

ಕರೆದರೂ ತಿರುಗದೆ
ಜಿಗಿದು ಓಡಿದಳಲ್ಲ,
ಯಾರಿವಳು ಎರಳೆಮರಿ ಎಂದಿರೆ?
ಇವಳೆ ಊರ್ಮಿಳೆ, ತುಂಬುಜಂಬುನೇರಳೆ
ನಮ್ಮ ಮಲೆನಾಡ ಸಿಹಿಪೇರಲೆ.
ನನಗು ಇವಳಿಗು ಸ್ನೇಹ ತೀರ ಈಚೆಗೆ ಎನ್ನಿ
ನನ್ನ ಕಂಡರೆ ನಾಚಿಕೆ,
ಪ್ರೀತಿಯಲಿ ಬಾ ಎಂದು ರಮಿಸಿದರೆ ನಿಲ್ಲುವಳು
ನಾಲ್ಕಾರು ಮಾರಾಚೆಗೆ –
ಮತ್ತೊಮ್ಮೆ ಕರೆದಾನೆ ಎಂಬಾಸೆ ಮಿನುಗುವುದು
ಕಣ್ಣ ತಿಳಿತೆರೆಯಾಚೆಗೆ.
ನಮ್ಮ ನಡುವಿನ ಇಂಥ ಅಂತರಕೆ ನಾನಿಟ್ಟೆ
ಚಾಕಲೇಟಿನ ಸೇತುವೆ!

ಪುಟ್ಟ ಕಣ್ದೊಟ್ಟಿಲಲಿ
ಮಿಂಚರಸದಲಿ ನೆನೆದ ಎರಡು ಕರಿಗೋಲಿ,
ಬಾನು ಕಡಲರಿಯದದರಾಳದಲಿ ಬ್ರಹ್ಮಾಂಡ
ಹೊಡೆಯುವುದು ಜೋಲಿ,
ತುಟಿ ತೆರೆದರಿವಳು-
ಬಾನು ಬುವಿಯನು ತಬ್ಬಿ
ಹಗಲು ಇರುಳನು ದಬ್ಬಿ
ಮರಮರದಿ ಹಾಡುವುವು ಹಕ್ಕಿ ಕೊರಳುಬ್ಬಿ;
ಹೂ ಸುರಿದು ಹಣ್ ಬಿರಿದು
ದಡದಡನೆ ಹೊಳೆ ಹರಿದು
ಇಳೆಗೆ ಮಳೆ ತುಳುಕುವುದು ಹೂಬಿಸಿಲು ಹಬ್ಬಿ!

ಕಿಲಕಿಲನೆ ನಕ್ಕಳೆಂದರೆ ಇವಳು
ಜಡಕು ಕಚಗುಳಿಯನಿಟ್ಟಂತೆ,
ಹರಿದ ಕರಿಮುಗಿಲಲ್ಲಿ ಮಲಗಿರುವ ಬಾನಿಗೆ
ಹುಣ್ಣಿಮೆಯ ಹಾಲು ಹರಿದಂತೆ,
ಕರಿಯ ಕಿರುಜಡೆ ಬೆಣ್ಣೆಗನ್ನೆ ಮೇಲಿಳಿದಿರಲು
ಮಿಂಚು ಮುಗಿಲಾಟದಂತೆ,
ಹೂಗಾಲನಿಟ್ಟು ಜಿಗಿದರೆ ಅದರ ಸ್ಪರ್ಶಕೇ
ಪುಳಕ ನೆಲಕೆ!

ತುಂಬುಕಿತ್ತಲೆಗೆನ್ನೆ ಮಿಂಚುಗಣ್ಣಿನ ಹುಡುಗಿ
ಹೂಮೈಯ ಬೆಡಗಿ!
ತಿಂಗಳನೆ ನಾಚಿಸುವ ಬೆಣ್ಣೆಗೆನ್ನೆಯೊಳೊಂದು
ಕಪ್ಪು ಕಲೆ ಮಿರುಗಿ
ಮುದ್ದು ಮುಖದೊಳಗೊಮ್ಮೆ ತುಂಟನಗೆ ತುಳುಕಿಸಲು
ನಾ ಮೈಯ ಮರೆತು,
ಮುತ್ತಮಳೆ ಸುರಿಸುವೆನು ನೋಯುವುದೊ ಹೂಗೆನ್ನೆ
ಎಂಬುದನೂ ಮರೆತು.

ನಿನ್ನಂಥ ನೆರೆಯಿರಲು
ಯಾವ ಭಾಗ್ಯಕೆ ನನಗೆ ಕಡಮೆ ಹೇಳು?
ನೀ ನನ್ನ ಬಳಿಯಲಿರೆ
ಮುಕ್ತಿಯೂ ಬೇಡ ಸಾಕಿಂಥ ಬಾಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಸಿಕತೆ
Next post ಶ್ರೀ ಸತ್ಯ ಶಿವಯುಗದ ಕಲ್ಪತರಲಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

cheap jordans|wholesale air max|wholesale jordans|wholesale jewelry|wholesale jerseys